ಕರ್ನಾಟಕ

ಎಲ್ಲರೂ ಸೇರಿ ನಮ್ಮನ್ನು ಮುಗಿಸಿ ಬಿಟ್ಟರು: ಕುಮಾರಸ್ವಾಮಿ

Pinterest LinkedIn Tumblr


ಮಂಡ್ಯ: ಎಲ್ಲರೂ ಸೇರಿ ನಮ್ಮನ್ನು ಮುಗಿಸಿ ಬಿಟ್ಟರು ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ತಮ್ಮ ನೋವು ತೋಡಿಕೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಬ್ಯಾಡರಹಳ್ಳಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಮಗನ ಸೋಲಿನ ಬಗ್ಗೆ ನೋವಿನ ಮಾತನ್ನಾಡಿದರು.

ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ನಡೆಸಿದ್ದ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದರು. ಈ ವಿಚಾರವನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎಚ್‌ಡಿಕೆ, ನಿಖಿಲ್‌ ಚುನಾವಣೆಗೆ ಸ್ಪರ್ಧೆ ನಡೆಸುವುದು ಬೇಡ ಎಂದಿದ್ದೆ. ಆದರೆ ಎಲ್ಲರೂ ಸೇರಿ ನಮ್ಮನ್ನು ಮುಗಿಸಿಬಿಟ್ಟರು ಎಂದು ನೋವು ತೋಡಿಕೊಂಡರು.

ಹೀಗಿದ್ದರೂ ಮಂಡ್ಯ ಜಿಲ್ಲೆಯ ಜನರ ಬಗ್ಗೆ ಬೇಸರ ಇಲ್ಲ ಎಂದ ಕುಮಾರಸ್ವಾಮಿ ಮಗನ ಸೋಲನ್ನು ಮಾತ್ರ ಮರೆತಿಲ್ಲ ಎಂಬುವುದನ್ನು ಮತ್ತೊಮ್ಮೆ ಬಹಿರಂಗವಾಗಿಯೇ ಬೇಸರ ವ್ಯಕ್ತಪಡಿಸುವ ಮೂಲಕ ಸಾಬೀತು ಪಡಿಸಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ನಡೆಸಿದ್ದರು. ಆದರೆ ಅವರ ವಿರುದ್ಧವಾಗಿ ಕಣದಲ್ಲಿದ್ದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿಯಾಗಿ ಗೆಲುವು ಸಾಧಿಸಿದ್ದರು.

ಭಾರೀ ಕುತೂಹಲಕ್ಕೆ ಕಾರಣವಾದ ಈ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲ್ಲುತ್ತಾರೆಂದೇ ಭಾವಿಸಲಾಗಿತ್ತು. ಆದರೆ ಅಂತಿಮ ಫಲಿತಾಂಶ ಭಿನ್ನವಾಗಿತ್ತು. ನಿಖಿಲ್ ಗೆಲವಿಗೆ ಎಚ್‌ಡಿ ಕುಮಾರಸ್ವಾಮಿ ಹಾಗೂ ಕುಟುಂಬ ಸಾಕಷ್ಟು ಪ್ರಯತ್ನ ಪಟ್ಟಿತ್ತು.

Comments are closed.