ಕರ್ನಾಟಕ

ಆರ್ ಎಸ್‌ಎಸ್ ನ ಮುಖವಾಣಿಯಾಗಿ ಬಿಜೆಪಿ ಕೆಲಸ ಮಾಡುತ್ತಿದೆ: ನಾರಾಯಣ ಸ್ವಾಮಿ

Pinterest LinkedIn Tumblr


ಬೆಂಗಳೂರು: ಆರ್ ಎಸ್‌ಎಸ್ ನ ಮುಖವಾಣಿಯಾಗಿ ಬಿಜೆಪಿ ನಾಯಕರು ಕೆಲಸ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಇವರುಗಳು ಗೊಂಬೆಗಳ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರ ಕೀ ಇರುವುದು ಕೇಶವ ಕೃಪಾದಲ್ಲಿ ಎಂದು ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ನಾರಾಯಣ ಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಶವ ಕೃಪಾಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡುತ್ತಿರುವ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು.

ನಾಳೆ ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗುತ್ತಿದೆ. ಯಾವ ವಿಚಾರ ಚರ್ಚೆ ಮಾಡಬೇಕು ಎನ್ನುವ ಬಗ್ಗೆ ಇಂದು ಸಭೆ ಸೇರಿ ಚರ್ಚೆ ಮಾಡುತ್ತೇವೆ. ಇವತ್ತು ಸಭೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರು ಭಾಗಿಯಾಗುತ್ತಿದ್ದಾರೆ ಎಂದರು.

ಜನ ಸಾಮಾನ್ಯರ ವಿರೋಧಿ ಕಾನೂನನ್ನು ತರಲು ಬಿಜೆಪಿ ಮುಂದಾಗಿದೆ. ಅದಕ್ಕೆ ನಮ್ಮ ವಿರೋಧವಿದೆ. ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ಮುಂದಾಗಿದ್ದಾರೆ. ಅದನ್ನು ಕೂಡ ಚರ್ಚೆ ಮಾಡುತ್ತೇವೆ ಎಂದರು.

Comments are closed.