ಕರ್ನಾಟಕ

ಇಂದು ರೈತ ಸಂಘಟನೆಗಳಿಂದ ಭಾರತ್ ಬಂದ್​: ನಮ್ಮ ರಾಜ್ಯದಲ್ಲಿ ಪರಿಣಾಮ ಬೀರದು ಎಂದ ಮುಖ್ಯಮಂತ್ರಿ ಯಡಿಯೂರಪ್ಪ

Pinterest LinkedIn Tumblr


ಪಣಜಿ: ಇಂದು (ಡಿ. 8ರಂದು) ದೇಶಾದ್ಯಂತ ಬಂದ್ ನಡೆಸಲು ರೈತ ಸಂಘಟನೆಗಳು ಕರೆ ನೀಡಿದೆ. ಈ ನಡುವೆ ಭಾರತ್ ಬಂದ್ ನಮ್ಮಲ್ಲೇನೂ ಪರಿಣಾಮ ಬೀರದು ಎಂದು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕೆಲವು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರದೊಂದಿಗೆ ಮಾತುಕತೆ ಫಲಪ್ರದವಾಗದ್ದರಿಂದ ಭಾರತ್​ ಬಂದ್​ಗೆ ಕರೆ ನೀಡಿವೆ. ರಾಷ್ಟ್ರವ್ಯಾಪಿ ಬಂದ್ ನಡೆಸಲು ರೈತ ಸಂಘಟನೆಗಳು ನೀಡಿರುವ ಈ ಕರೆ ಸಂಬಂಧ ಪತ್ರಕರ್ತರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಯವರು ಇಂಥದ್ದೊಂದು ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರೂ ಕಾಯ್ದೆಗಳು ರೈತರ ಹಿತಾಸಕ್ತಿ ಪರವಾಗಿಯೇ ಇವೆ. ಈ ಕಾನೂನುಗಳಿಂದ ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆ ಲಭಿಸಲಿದೆ ಎಂದು ಸಮರ್ಥಿಸಿಕೊಂಡಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಭಾರತ್ ಬಂದ್ ಗೋವಾದಲ್ಲೇನೂ ಪರಿಣಾಮ ಬೀರದು ಎಂದಿದ್ದಾರೆ. ಮತ್ತೊಂದೆಡೆ ಗೋವಾ ಕಾಂಗ್ರೆಸ್​ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದೆ.

Comments are closed.