ಕರ್ನಾಟಕ

ಇಂಗ್ಲೆಂಡ್​ನಲ್ಲಿ ತೀವ್ರವಾಗಿ ಹರಡುತ್ತಿರುವ ಹೊಸ ವೈರಾಣು: ರಾಜ್ಯ ಆರೋಗ್ಯ ಸಚಿವರಿಂದ ಎಚ್ಚರಿಕೆ ಸಂದೇಶ..!

Pinterest LinkedIn Tumblr

ಬೆಂಗಳೂರು: ಇಂಗ್ಲೆಂಡ್​ನಲ್ಲಿ ಹೊಸ ಮಾದರಿಯ ವೈರಾಣು ಪತ್ತೆಯಾಗಿದ್ದು, ಕೊರೊನಾಗಿಂತಲೂ ಹೊಸ ವೈರಾಣು ಬಹು ಬೇಗನೇ ಹರಡುತ್ತೆ ಹುಷಾರಾಗಿರಿ ಎಂದು ರಾಜ್ಯ ಆರೋಗ್ಯ ಸಚಿವ ಕೆ.ಸುಧಾಕರ್ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಜನರ ರಕ್ಷಣೆಯೇ ಸರ್ಕಾರಕ್ಕೆ ಮುಖ್ಯ ಎಂದಿರುವ ಸಚಿವರು, ​ ಕೊರೊನಾದ ಹೊಸ ಪ್ರಭೇದ ಬರುತ್ತಿರುವ ಹಿನ್ನೆಲೆ ಎಚ್ಚರಿಕೆ ವಹಿಸಿ, ನಾವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳಬೇಕು. ಹಾಗಂತ, ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ. ನಮ್ಮ ರಾಜ್ಯದಲ್ಲಿ ಈ ಸೋಂಕು ಕಾಣಿಸಿಕೊಂಡಿಲ್ಲ. ಆದ್ರು ನಾವು ನಿರ್ಲಕ್ಷ್ಯ ಮಾಡೋದಿಲ್ಲ ಎಂದರು.

ಇನ್ನು ವಿದೇಶದಿಂದ ಬಂದವರು ಖಂಡಿತವಾಗಿಯೂ RTPCR ಟೆಸ್ಟ್​ ಮಾಡಿಸಿಕೊಳ್ಳಬೇಕು. ಕ್ವಾರಂಟೈನ್‌ʼಗೆ ಒಳಗಾಗಬೇಕು.
ಬ್ರಿಟನ್​ನಿಂದ ರಾಜ್ಯಕ್ಕೆ 138 ಪ್ರಯಾಣಿಕರು ಕೊರೊನಾ ನೆಗೆಟಿವ್​ ರಿಪೋರ್ಟ್ ಇಲ್ಲದೆ ಬಂದಿದ್ದಾರೆ. ಇವರನ್ನ ಟ್ರೇಸ್ ಮಾಡಿ ಟೆಸ್ಟ್ ಮಾಡ್ತೀವಿ. ನಾಳೆಯಿಂದ ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ನಡೆಸಲಾಗುತ್ತೆ. ಕೇಂದ್ರ ಸರ್ಕಾರವೂ ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ವಿಶೇಷ ನಿಗಾ ಇಡುವಂತೆ ಸೂಚಿಸಿದೆ ಎಂದು ವಿವರಿಸಿದರು.

Comments are closed.