ಕರ್ನಾಟಕ

ಪಿಎಫ್‌ಐ ಬಾಲ ಬಿಚ್ಚಿದರೆ ಬಾಲನೂ ಕಟ್, ತಲೆನೂ ಕಟ್ ಮಾಡಬೇಕಾಗುತ್ತದೆ: ಸಿ.ಟಿ.ರವಿ ಸ್ಪೋಟಕ ಹೇಳಿಕೆ

Pinterest LinkedIn Tumblr


ಚಿಕ್ಕಮಗಳೂರು: ಪಿಎಫ್‌ಐ ನವರು ಬಾಲ ಬಿಚ್ಚಿ ಮೆರೆಯುವ ಕಾಲ ಈಗಿಲ್ಲ. ಬಾಲ ಬಿಚ್ಚಿದರೆ ಬಾಲನೂ ಕಟ್, ತಲೆನೂ ಕಟ್ ಮಾಡಬೇಕಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಚೇರಿ ಮೇಲೆ ಪಿಎಫ್‌ಐ ಕಾರ್ಯಕರ್ತರ ಮುತ್ತಿಗೆ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಅಕ್ರಮವಾಗಿ ಹಣ ಚಲಾವಣೆ ಮಾಡಲಾಗುತ್ತದೆ. ಆದರೆ ಇಡಿ ತನಿಖೆ ಮಾಡಬೇಡ ಎನ್ನಲೂ ಪಿಎಫ್‌ಐ ಯಾರು ಎಂದು ಖಾರವಾಗಿ ಪ್ರಶ್ನಿಸಿದರು.

ಸಿಎಎ ವಿರುದ್ಧದ ಪ್ರತಿಭಟನೆಗೆ ನೂರಾರು ಕೋಟಿ ರೂ ಅಕ್ರಮ ಹಣ ದೇಶವಿದೇಶದಿಂದ ಬಂದ ಮಾಹಿತಿ ಇದೆ, ಅದರ ಬಗ್ಗೆ ಇಡಿ ತನಿಖೆ ಮಾಡಿದರೆ, ಇವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಳ್ಳುವುದು ಏಕೆ ಎಂದರು.

ಭಾರತ ಇರುವುದು ಬಯೋತ್ಪಾದನೆ ಮಾಡಲು, ಅರಾಜಕತೆ ಮಾಡಲು ಅಲ್ಲ. ಭಯೋತ್ಪಾದನೆಗೆ ವಿದೇಶದಿಂದ ಹಣ ಬರುವುದನ್ನು ತಡೆಯಲು ತನಿಖೆ ನೆಡೆಯಬೇಕಿದೆ. ತನಿಖೆಯ ಬಳಿಕ ಇವರ ಉದ್ದೇಶ- ದುರುದ್ದೇಶವನ್ನು ಜಗತ್ತಿಗೆ ಹೇಳುತ್ತೇವೆ. ಇವರನ್ನು ಹೆಡೆಮುರಿಕಟ್ಟುತ್ತೇವೆ ಎಂದು ಸಿ.ಟಿ ರವಿ ಹೇಳಿದರು.

Comments are closed.