ಬೆಂಗಳೂರು: ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆ ಹಾಗೂ ಗುರುವಾರ ನಡೆದ ಖಾತೆ ಹಂಚಿಕೆ ವೇಳೆ ಕಮಲ ಪಾಳಯದಲ್ಲಿ ಭುಗಿಲೆದ್ದಿದ್ದ ಅಸಮಾಧಾನ ಶಮನಗೊಳಿಸಲು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸಚಿವರ ಖಾತೆ ಹಂಚಿಕೆಯಲ್ಲಿ ಕಿರು ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ನೂತನ ಆದೇಶದಂತೆ ಸಚಿವ ಎಂಟಿಬಿ ನಾಗರಾಜ್ ಅವರಿಗೆ ಪೌರಾಳಿಡತ ಮತ್ತು ಸಕ್ಕರೆ ಖಾತೆಯನ್ನು, ಸಚಿವ ಗೋಪಾಲಯ್ಯ ಅವರಿಗೆ ಅಬಕಾರಿ ಖಾತೆಯನ್ನು ನೀಡಲಾಗಿದೆ.
ಸಚಿವ ಜೆಸಿ ಮಾಧುಸ್ವಾಮಿ ಅವರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಜೊತೆ ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿಯಾಗಿ ನೀಡಲಾಗಿದೆ. ಇನ್ನು ಸಚಿವ ಕೆಸಿ ನಾರಾಯಣ ಗೌಡ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು ನೀಡಲಾಗಿದ್ದು, ಅರವಿಂದ ಲಿಂಬಾವಳಿ ಅವರಿಗೆ ಅರಣ್ಯ ಇಲಾಖೆಯ ಜೊತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜವಬ್ದಾರಿ ಹೆಚ್ಚುವರಿಯಾಗಿ ನೀಡಲಾಗಿದೆ.
ಸಚಿವ ಆರ್. ಶಂಕರ್ ಅವರಿಗೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಮಂತ್ರಿ ಸ್ಥಾನ ನೀಡಲಾಗಿದೆ.
Comments are closed.