ಕರ್ನಾಟಕ

ಕೃಷಿ ಇಲಾಖೆ ರಾಯಭಾರಿಯಾಗಲಿರುವ ‘ಯಜಮಾನ’- ಸಂಭಾವನೆ ಪಡೆಯದೆ ಓಕೆ ಅಂದ ಚಾಲೆಂಜಿಂಗ್ ಸ್ಟಾರ್

Pinterest LinkedIn Tumblr

ಬೆಂಗಳೂರು: ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಅದರಲ್ಲಿ ಆಸಕ್ತಿ ಹೊಂದಿರುವ ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು, ಶೀಘ್ರದಲ್ಲೇ ಕೃಷಿ ಇಲಾಖೆ ರಾಯಭಾರಿಯಾಗಿ ಕಾರ್ಯ ಆರಂಭಿಸಲಿದ್ದಾರೆ ಎನ್ನಲಾಗಿದೆ.

 

ಯಾವುದೇ ಸಂಭಾವನೆ ಪಡೆಯದೆ ಕೃಷಿ ಇಲಾಖೆಯ ರಾಯಭಾರಿಯಾಗಲು ದರ್ಶನ್ ಅವರು ಒಪ್ಪಿಗೆ ನೀಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಕೃಷಿ ಸಚಿವ ಬಿಸಿ ಪಾಟೀಲ್ ಅವರು ದರ್ಶನ್ ಅವರನ್ನು ಅವರ ಫಾರ್ಮ್ ಹೌಸಿನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಮೈಸೂರಿನಲ್ಲಿನ ದರ್ಶನ್ ಅವರ ಫಾರ್ಮ್ ಹೌಸ್​ನಲ್ಲಿ ಚಾಲೆಂಜಿಂಗ್ ಸ್ಟಾರ್ ಅವರನ್ನು ಭೇಟಿಯಾದ ಬಿ.ಸಿ. ಪಾಟೀಲ್ ಅವರು, ಕೃಷಿ ಇಲಾಖೆ ರಾಯಭಾರಿ ಯೋಜನೆಯ ಬಗ್ಗೆ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ. ರೈತ ಪರ ಕಾರ್ಯಕ್ರಮಗಳಲ್ಲಿ ಸರ್ಕಾರದ ರಾಯಭಾರಿಯಾಗಲಿರುವ ದರ್ಶನ್​ ಅವರು, ಶೀಘ್ರದಲ್ಲಿಯೇ ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಭಾಗಿಯಾಗುವ ಬಗ್ಗೆ ಸದ್ಯದಲ್ಲಿಯೇ ದಿನಾಂಕವೂ ಪ್ರಕಟಗೊಳ್ಳಲಿದೆ ಎನ್ನಲಾಗುತ್ತಿದೆ.

Comments are closed.