ಕರ್ನಾಟಕ

ರೌಡಿಶೀಟರ್ ಮೇಲೆ ಗುಂಡು ಹಾರಿಸಿ ಬಂಧಿಸಿದ ಸಿಲಿಕಾನ್ ಸಿಟಿ ಪೊಲೀಸರು..!

Pinterest LinkedIn Tumblr

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಶೀಟರ್ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಸಂತೋಷ್(21 ) ಕಾಲಿಗೆ ರಾಜಗೋಪಾಲನಗರ ಪೊಲೀಸರು, ಜಿಕೆಡಬ್ಲ್ಯೂ ಲೇಔಟ್‌ ಬಳಿ ಗುಂಡು ಹಾರಿಸಿ ಬಂಧಿಸಿದ್ದಾರೆ.

(ಸಾಂದರ್ಭಿಕ ಚಿತ್ರ)

ಸಂತೋಷ್ ರಾಜಗೋಪಾಲನಗರ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ಜ. 9ರಂದು ನಡೆದಿದ್ದ ಶ್ರೀನಿವಾಸ್ ಅಲಿಯಾಸ್ ಕರಿಸೀನನ ಹತ್ಯೆಯಲ್ಲಿ ಭಾಗಿಯಾಗಿದ್ದ. ಶ್ರೀನಿವಾಸ್ ಕತ್ತಿಗೆ ಮನಬಂದಂತೆ ಲಾಂಗ್‌ ಬೀಸಿ ಸಂತೋಷ್‌ ಕೊಲೆ ಮಾಡಿದ್ದ.

ಈ ಪ್ರಕರಣ ಸಂಬಂಧ ಬಂಧನಕ್ಕೆ ತೆರಳಿದಾಗ ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಸಂತೋಷ್‌ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಆತ್ಮ ರಕ್ಷಣೆಗಾಗಿ ರಾಜಗೋಪಾಲ ನಗರ ಪಿಎಸ್ಐ ಹನುಮಂತ ಹಡಿಮನಿ ಅವರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಘಟನೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

Comments are closed.