ಬೆಂಗಳೂರು: ರಾಮ ಮಂದಿರ ನಿರ್ಮಾಣ ದೇಣಿಗೆ ವಿಚಾರದಲ್ಲಿ ವಿರೋಧ ಪಕ್ಷಗಳು ಬಿಜೆಪಿ ಮತ್ತು ಆರ್.ಎಸ್ಎಸ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯನವರು ದೇಣಿಗೆ ಸಂಗ್ರಹದ ಬಗ್ಗೆ ಮಾಧ್ಯಮವೊಂದರ ಜೊತೆ ಮಾತನಾಡಿದ್ದು ‘ನನ್ನ ಮನೆಗೂ ಬಂದಿದ್ದರೂ ಆದರೆ ನಾನು ದೇಣಿಗೆ ಕೊಡುವುದಿಲ್ಲ ಹೋಗಿ’ ಎಂದು ಹೇಳಿದ್ದಾಗಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
ಈ ಹಿಂದೆಯೇ ರಾಮ ಮಂದಿರ ನಿರ್ಮಾಣ ಸಂಬಂಧ ಇಟ್ಟಿಗೆ ಮತ್ತು ಹಣ ಸಂಗ್ರಹಿಸಲಾಗಿತ್ತು. ಆದರೆ ಇಟ್ಟಿಗೆಯನ್ನು ಊರಿನಾಚೆ ಬಿಸಾಡಿ ದುಡ್ಡನ್ನು ತೆಗೆದುಕೊಂಡು ಹೋಗಿದ್ದರು. ಇದೆಲ್ಲಾ ರಾಮನ ಲೆಕ್ಕ, ಕೃಷ್ಣ ಲೆಕ್ಕ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದು ಇನ್ನು ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹದ ಮಾಹಿತಿ ನೀಡುತ್ತಾರಾ ಎಂದು ಪ್ರಶ್ನಿಸಿದ್ದಾರೆ.
ವಿವಾದಿತ ಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ನೀಡುವುದಿಲ್ಲ. ಅದರ ಬದಲಿಗೆ ಬೇರೆ ಕಡೆ ಕಟ್ಟುವುದಾದರೆ ದೇಣಿಗೆ ನೀಡುತ್ತೇನೆ ಎಂದು ಹೇಳಿದ್ದಾರೆ.
Comments are closed.