ಕರ್ನಾಟಕ

ಐಎಂಎ ವಂಚಕ ಮನ್ಸೂರ್’ಗೂ ನನಗೂ ಯಾವುದೇ ಸಂಬಂಧ ಇಲ್ಲ: ಸಿದ್ಧರಾಮಯ್ಯ

Pinterest LinkedIn Tumblr

ಉಡುಪಿ: ಮೀಸಲಾತಿ ಕೇಳುವುದು ತಪ್ಪೇನಿಲ್ಲ. ಸಂವಿಧಾನಾತ್ಮಕವಾಗಿ ಅರ್ಹತೆ ಇರುವವರಿಗೆ ಮೀಸಲಾತಿ ಕೊಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಜಾತಿ ಹೋರಾಟಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಪರಿಶಿಲಿಸಿ ಶಿಫಾರಸ್ಸು ಮಾಡಬೇಕು. ಹೊಸ ಸೇರ್ಪಡೆ ಮತ್ತು ಮೀಸಲಾತಿ ಕೈಬಿಡುವ ಬಗ್ಗೆ ಆಯೋಗ ಶಿಫಾರಸು ಮಾಡಬೇಕು. ರಾಜ್ಯದಲ್ಲಿ ಪ್ರತಿನಿತ್ಯ ಹೋರಾಟಗಳು ನಡೆಯುತ್ತಿದೆ ಸರಕಾರ ಸಂವಿಧಾನಾತ್ಮಕವಾಗಿ ಶೀಘ್ರ ತೀರ್ಮಾನ ಮಾಡಲಿ ಎಂದು ಸಿದ್ದರಾಮಯ್ಯ ಸಲಹೆ ಕೊಟ್ಟರು.

ಇದೇ ಸಂದರ್ಭದಲ್ಲಿ ಐಎಂಎ ವಂಚಕ ಮನ್ಸೂರ್ ಗೂ ನನಗೂ ಯಾವುದೇ ಸಂಬಂಧ ಇಲ್ಲ. ಯಾರಿಗೋ ಕೊಟ್ಟು ನನಗೆ ಕೊಟ್ಟಿದ್ದಾನೆ ಅಂದರೆ ಏನು ಪ್ರಯೋಜನ?. ಅವನು ಯಾರಿಗೆ ಕೊಟ್ಟಿದ್ದಾರೆ ಅವನಿಂದ ವಸೂಲಿ ಮಾಡಿ. ಐ ಡುನಾಟ್ ನೋ.. ನಾನು ಯಾರಿಂದಲೂ 5 ಪೈಸೆ ಪಡೆದಿಲ್ಲ. ನನಗೆ ಮನ್ಸೂರ್ ನಿಂದ ಹಣ ಪಡೆಯುವ ಯಾವ ಅಗತ್ಯವೂ ಇಲ್ಲ ಎಂದು ಸಿದ್ದರಾಮಯ್ಯ ಉತ್ತರಿಸಿದ್ರು.

Comments are closed.