ಕರ್ನಾಟಕ

ಇಂದು ಮಧ್ಯಾಹ್ನ 12 ಗಂಟೆಗೆ ಬಜೆಟ್ ಮಂಡಿಸಲಿರುವ ಸಿಎಂ ಬಿಎಸ್ ಯಡಿಯೂರಪ್ಪ !

Pinterest LinkedIn Tumblr

ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇಂದು (ಮಾರ್ಚ್ 8) ಮಧ್ಯಾಹ್ನ 12 ಗಂಟೆಗೆ ಮಂಡಿಸಲಿದ್ದಾರೆ.

ಹಣಕಾಸು ಖಾತೆ ಹೊಂದಿರುವ ಯಡಿಯೂರಪ್ಪನವರು 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ನಾಳೆ ಮಂಡಿಸುವುದಾಗಿ ಟ್ವೀಟರ್ ನಲ್ಲಿ ಪ್ರಕಟಿಸಿದ್ದಾರೆ.

ಇನ್ನು ಬಿಎಸ್ ಯಡಿಯೂರಪ್ಪನವರು 8ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. 2020ರಲ್ಲಿ 7ನೇ ಬಾರಿಗೆ ಬಜೆಟ್ ಮಂಡಿಸಿದ್ದರು.

ಈ ಹಿಂದೆ 2006ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 2 ಬಾರಿ ಬಜೆಟ್ ಮಂಡಿಸಿದ್ದರು. ಆ ಬಳಿಕ ರಾಜ್ಯದಲ್ಲಿ ಪೂರ್ಣ ಪ್ರಮಾಣದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದ ಅವಧಿಯಲ್ಲಿ 4 ಬಾರಿ ಬಜೆಟ್ ಮಂಡನೆ ಮಾಡಿದ್ದರು.

Comments are closed.