ಕರ್ನಾಟಕ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ ನಟ ಶಿವರಾಜ್ ಕುಮಾರ್

Pinterest LinkedIn Tumblr

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸಕ್ಕೆ ನಟ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ.

ಈ ಹಿಂದೆ ಮಧು ಬಂಗಾರಪ್ಪ ಅವರು ನನ್ನ ಜೊತೆ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ಸಿಗೆ ಬರುತ್ತಾರೆ ಅಂತ ಹೇಳಿಕೆ ಕೊಟ್ಟಿದ್ದರು. ಮಧು ಹೇಳಿಕೆ ಬೆನ್ನಲ್ಲೆ ಇದೀಗ ಡಿಕೆಶಿ ಮನೆಗೆ ಹ್ಯಾಟ್ರಿಕ್ ಹೀರೋ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್, ಇದು ನನ್ನ ಪರ್ಸನಲ್ ವಿಸಿಟ್ ಅಷ್ಟೇ. ಇಲ್ಲಿ ಯಾವುದೇ ರಾಜಕೀಯ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ಡಿಕೆಶಿ ಮಾತನಾಡಿ, ಶಿವರಾಜ್ ಕುಮಾರ್ ಕುಟುಂಬ ನಮ್ಮ ಕುಟುಂಬ ಆತ್ಮೀಯವಾಗಿ ಇದ್ದೇವೆ. ನಾವು ಆತ್ಮೀಯರು ನಮ್ಮ ಕುಟುಂಬಕ್ಕೂ ಅವರಿಗೆ ಆತ್ಮಿಯತೇ ಇದೆ. ಅವರು ಏನಕ್ಕೆ ಬಂದಿದ್ದರು, ಯಾವ ವಿಚಾರ ಮಾತಾಡಿದ್ವಿ ಅಂತಾ ಡಿಸ್ ಕ್ಲೋಸ್ ಮಾಡಲ್ಲ ಎಂದರು.

ಇದೇ ವೇಳೆ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದರ ಬಗ್ಗೆ ನಾನು ಮಾತಾಡಲ್ಲ. ಮಧು ಬಂಗಾರಪ್ಪ ಮಾತಾಡಬಹುದು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರ್ತಾರಾ ಹೇಗೆ ಎಂಬುದನ್ನು ನೀವೇ ಕಾದು ನೋಡಿ ಎಂದು ಹೇಳಿದರು.

Comments are closed.