ಕರ್ನಾಟಕ

ಬೆಂಗಳೂರಿನಲ್ಲಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್’ರನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾದ ದುಷ್ಕರ್ಮಿಗಳು

Pinterest LinkedIn Tumblr

ಬೆಂಗಳೂರು: ಮಹಾನಗರ ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆಯೇ ಪಾಲಿಕೆಯ ಮಾಜಿ ಸದಸ್ಯೆಯ ಹತ್ಯೆಯಾಗಿದೆ. ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರ ಕಚೇರಿ ಮುಂದೆಯೇ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ರೇಖಾ ಕದಿರೇಶ್ ಅವರು ಛಲವಾದಿಪಾಳ್ಯದ ಮಾಜಿ ಕಾರ್ಪೊರೇಟರ್‌ ಆಗಿದ್ದರು. 2018 ಫೆಬ್ರವರಿ 8 ರಂದು ರೇಖಾ ಪತಿಯ ಹತ್ಯೆ ನಡೆದಿತ್ತು. ಇದೀಗ ರೇಖಾ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆಗೈದಿದ್ದಾರೆ.

ಗುರುವಾರ ಬೆಳಗ್ಗೆ ತಮ್ಮ ಕಚೇರಿಯಲ್ಲಿ ಇದ್ದ ರೂಪಾ ಅವರನ್ನು ಅಲ್ಲಿಂಗ ಹೊರಗಡೆ ಕರೆದು ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಪರಿಚಯಸ್ಥರಿಂದಲೇ ಈ ಹತ್ಯೆ ನಡೆದಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಗುರುವಾರ ಬೆಳಗ್ಗೆ 9.30 ಕ್ಕೆ ಹತ್ಯೆ ಈ ಕೃತ್ಯ ನಡೆದಿದ್ದು ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ನೇತೃತ್ವದ ಪೊಲೀಸರ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹತ್ಯೆಗೆ ವೈಯಕ್ತಿಕ ವೈಷಮ್ಯ ಕಾರಣ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

2018 ರಲ್ಲಿ ರೇಖಾ ಅವರ ಪತಿ ಕದಿರೇಶ್ ಅವರನ್ನು ಕೂಡಾ ಇದೇ ರೀತಿ ಹತ್ಯೆ ಮಾಡಲಾಗಿತ್ತು. ವ್ಯವಹಾರಿಕ ವೈಷಮ್ಯದಿಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದರು. ಇದೀಗ ರೇಖಾ ಕದಿರೇಶ್ ಅವರ ಹತ್ಯೆಯ ಹಿಂದೆ ಸ್ಟೀಫನ್, ರಾಬರ್ಟ್‌, ಸೂರ್ಯ ಎಂಬುವವರ ಬಗ್ಗೆ ಅನುಮಾನ ಕದಿರೇಶ್ ಅವರ ಸಹೋದರಿ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಅವರೇ ಈ ಕೃತ್ಯ ಎಸಗಿದ್ದಾರಾ ಎಂಬ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

Comments are closed.