ಕರ್ನಾಟಕ

ಬೆಂಗಳೂರಿನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕ್ಯಾಬ್ ಚಾಲಕನ ಬಂಧನ

Pinterest LinkedIn Tumblr

ಬೆಂಗಳೂರು: ಸಿಲಿಕಾನ್ ಸಿಟಿ‌ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಿಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ‌.

(ಸಾಂದರ್ಭಿಕ ಚಿತ್ರ)

ಬೆಂಗಳೂರಿನ ಕ್ಯಾಬ್ ಚಾಲಕನಿಂದ ಈ‌ ಕೃತ್ಯ ನಡದಿದೆ ಎನ್ನಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿ ಚಾಲಕ ದೇವರಾಜ್ ಎನ್ನುವಾತನನ್ನು ಜೀವನ್‌ಭೀಮಾನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ನಡೆದ 24ಗಂಟೆಯೊಳಗೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ತಿಳಿಸಿದ್ದಾರೆ.

ಡಿಸಿಪಿ ಶರಣಪ್ಪ ಮತ್ತು ಹೆಚ್ಚುವರಿ ಆಯುಕ್ತ ಮುರುಗನ್‌ರಿಂದ ವಿಚಾರಣೆ ಮಾಡುಲಾಗುತ್ತಿದೆ‌. ಈ ವೇಳೆ ಕೃತ್ಯ ಚಾಲಕ ನಿರಾಕರಿಸಿದ್ದಾನೆ. ಪೊಲೀಸರು ಸತ್ಯಾಂಶ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳವಾರ ರಾತ್ರಿ ಮನೆಗೆ ಹೋಗಲು ಯುವತಿ ನಗರದ ಹೆಚ್​ಎಸ್​​ಆರ್ ಲೇಔಟ್​ನಿಂದ ಮುರುಗೇಶಪಾಳ್ಯಕ್ಕೆ ತೆರಳಲು ಕ್ಯಾಬ್ ಬುಕ್‌ ಮಾಡಿದ್ದರು. ಹೀಗಾಗಿ ಹೆಚ್​ಎಸ್​​ಆರ್ ಲೇಔಟ್​ಗೆ ಬಂದು ಯುವತಿ ಕರೆದೊಯ್ದ ಚಾಲಕ, ಬಳಿಕ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಜೀವನ್ ಭೀಮಾನಗರ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments are closed.