ಕರ್ನಾಟಕ

ಪತ್ನಿಯ ಶೀಲ‌ ಶಂಕಿಸಿ ಕತ್ತು ಸೀಳಿ ಕೊಲೆಗೈದು ಪರಾರಿಯಾದ ಫೈನಾನ್ಶಿಯರ್ ಪತಿ..!

Pinterest LinkedIn Tumblr

ಬೆಂಗಳೂರು: ಮೊಬೈಲ್ ಸಂಭಾಷಣೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಶೀಲ ಶಂಕಿಸಿ ಪತಿಯೇ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.

ರೂಪ(34) ಕೊಲೆಯಾದ ದುರ್ದೈವಿ. ಬುಧವಾರ ಸಂಜೆ ವೇಳೆಗೆ ಘಟನೆ ನಡೆದಿದ್ದು, ಆರೋಪಿ ಕಾಂತರಾಜ್ ವೃತ್ತಿಯಲ್ಲಿ ಫೈನಾನ್ಶಿಯರ್ ಹಾಗೂ ರಿಯಲ್ ಎಸ್ಟೇಟ್ ಬ್ರೋಕರ್ ಕೆಲಸ ಮಾಡುತ್ತಿದ್ದ. ಘಟನೆ ಬಳಿಕ ಕಾಂತರಾಜ್ ಮನೆಗೆ ಬೀಗ ಹಾಕಿ ಎಸ್ಕೇಪ್ ಆಗಿದ್ದಾನೆ.

ಘಟನೆ ವಿವರ:
ಬುಧವಾರ ಸಂಜೆ 4.30 ರಲ್ಲಿ ಪತಿ ಕಾಂತರಾಜ್ ಪತ್ನಿ ರೂಪಾಳ ಮೊಬೈಲ್ ಪರಿಶೀಲಿಸಿದಾಗ ಆಕೆ ಬೇರೆ ವ್ಯಕ್ತಿಯೊಂದಿಗೆ ಮಾತನಾಡಿರುವುದು ಕಂಡುಬಂದಿದೆ. ಈ ವಿಚಾರವಾಗಿ ಗಂಡ ಹೆಂಡತಿ ನಡುವೆ ಜಗಳವಾಗಿದೆ. ಇದೇ ವೇಳೆ ಆಕ್ರೋಶಗೊಂಡ ಆರೋಪಿ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಹತ್ಯೆ ಮಾಡಿ ಮನೆಯ ಬಾಗಿಲು ಲಾಕ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾನೆ. ಟ್ಯೂಷನ್‍ಗೆ ಹೋಗಿದ್ದ ಮಗ ಮನೆಗೆ ವಾಪಸ್ಸಾದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು ಕಾಂತರಾಜ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Comments are closed.