ಕರ್ನಾಟಕ

ರುಚಿಯಾದ ಸಾಂಬಾರ್ ಮಾಡದ್ದಕ್ಕೆ ಕೋಪಗೊಂಡ ಮಗನಿಂದ ತಾಯಿ, ಸಹೋದರಿಯ ಕೊಲೆ

Pinterest LinkedIn Tumblr

ಉತ್ತರಕನ್ನಡ: ಜಿಲ್ಲೆಯ ಕೊಡಗೋಡು ಎಂಬಲ್ಲಿ ರುಚಿಯಾದ ಸಾಂಬಾರ್ ಮಾಡದಿದ್ದಕ್ಕೆ ಯುವಕನೋರ್ವ ತನ್ನ ತಾಯಿ ಮತ್ತು ಸಹೋದರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.

ಆರೋಪಿಯನ್ನು 24 ವರ್ಷದ ಮಂಜುನಾಥ ಹಸ್ಲರ್ ಎಂದು ಗುರುತಿಸಲಾಗಿದೆ. ಮೃತರನ್ನು ಮಂಜುನಾಥ್ ತಾಯಿ ಪಾರ್ವತಿ ನಾರಾಯಣ ಹಸ್ಲರ್ (42) ಮತ್ತು ರಮ್ಯಾ ನಾರಾಯಣ ಹಸ್ಲರ್ ಎಂದು ಗುರುತಿಸಲಾಗಿದೆ.

ಆರೋಪಿ ಮಂಜುನಾಥ್ ಮದ್ಯವ್ಯಸನಿ ಎಂದು ತಿಳಿದು ಬಂದಿದೆ. ರುಚಿಯಾದ ಸಾಂಬರ್ ಮಾಡಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ತಾಯಿಯೊಂದಿಗೆ ಜಗಳವಾಡಿದ್ದನು. ಅಲ್ಲದೆ ಸಾಲ ಪಡೆದು ತನ್ನ ತಂಗಿಗೆ ಸೆಲ್‌ಫೋನ್ ಖರೀದಿಸುವ ತಾಯಿಯ ವಿಚಾರದ ಬಗ್ಗೆ ಕುಪಿತಗೊಂಡಿದ್ದ ಎನ್ನಲಾಗಿದೆ.

ಮೊಬೈಲ್ ಕೊಡಿಸಬೇಡ ಎಂದು ಹೇಳಲು ನೀನು ಯಾರು ಎಂದು ಪಾರ್ವತಿ ಮಗ ಮಂಜುನಾಥ್ ನನ್ನು ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ಮಂಜುನಾಥ್ ಮನೆಯಲ್ಲಿ ಮಲಗಿದ್ದ ತಾಯಿಯ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ನಂತರ, ಆತ ತನ್ನ ಸಹೋದರಿಯ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ತಂದೆ ಮನೆಗೆ ಮರಳಿದ ನಂತರ ಮಗನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

 

Comments are closed.