ಕರ್ನಾಟಕ

ಕುದುರೆ ರೇಸ್​ಗೆ ಅನುಮತಿ ನೀಡಿ ಕರ್ನಾಟಕ ಸರ್ಕಾರದ ಆದೇಶ; ನೈಟ್ ಕರ್ಫ್ಯೂ ಹಿಂಪಡೆದು ಆದೇಶ

Pinterest LinkedIn Tumblr

ಬೆಂಗಳೂರು: ಕುದುರೆ ರೇಸ್​ಗೆ ಅನುಮತಿ ನೀಡಿ ಕರ್ನಾಟಕ ಸರ್ಕಾರ ಇಂದು (ನವೆಂಬರ್ 5) ಆದೇಶ ಹೊರಡಿಸಿದೆ. ಕೊವಿಡ್ 19 ಕಾರ್ಯವಿಧಾನ ಪಾಲಿಸುವಂತೆ ಸರ್ಕಾರ ಷರತ್ತು ಹಾಕಿದೆ. ಕೊರೊನಾ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಚಟುವಟಿಕೆಗಳು ನಿಂತು ಹೋಗಿದ್ದವು. ಇದೀಗ, ಮತ್ತೆ ಜನಜೀವನ ಯಥಾಸ್ಥಿತಿಗೆ ಮರಳಲು ಆರಂಭಿಸಿದೆ. ಶಾಲಾ ಕಾಲೇಜುಗಳು ಆರಂಭವಾಗಿವೆ. ಎಲ್​ಕೆಜಿ, ಯುಕೆಜಿ ಭೌತಿಕ ತರಗತಿ ನಡೆಸುವುದಕ್ಕೂ ಅನುಮತಿ ನೀಡಲಾಗಿದೆ. ಜೊತೆಗೆ ನೈಟ್ ಕರ್ಫ್ಯೂ ಕೂಡ ಹಿಂಪಡೆದು ಆದೇಶ ಹೊರಡಿಸಲಾಗಿದೆ.

ಕುದುರೆ ಓಟದ ಸ್ಪರ್ಧೆಗಳನ್ನು ಮುಂದುವರಿಸುವುದಕ್ಕೆ ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ರೇಸ್ ಕೋರ್ಸ್​​ಗೆ ಪ್ರವೇಶಿಸುವವರು ಲಸಿಕೆ ಪಡೆದಿರಬೇಕು. ಕಡ್ಡಾಯವಾಗಿ ಲಸಿಕೆ ಪಡೆದಿರಬೇಕೆಂದು ಸರ್ಕಾರ ಷರತ್ತು ವಿಧಿಸಿದೆ. ಸ್ಥಳಾವಕಾಶದ ಸಾಮರ್ಥ್ಯ ಆಧರಿಸಿ ಜನರು ರೇಸ್​ನಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.

ನೈಟ್ ಕರ್ಫ್ಯೂ ಹಿಂಪಡೆದ ಸರಕಾರ….
ಕರ್ನಾಟಕ ರಾಜ್ಯಾದ್ಯಂತ ವಿಧಿಸಿದ್ದ ನೈಟ್ ಕರ್ಫ್ಯೂ ಹಿಂಪಡೆದು ಸರ್ಕಾರ ಇಂದು (ನವೆಂಬರ್ 5) ಆದೇಶ ಹೊರಡಿಸಿದೆ. ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆ ವರೆಗೆ ವಿದಿಸಿದ್ದ ಆದೇಶ ವಾಪಸ್​ ಪಡೆಯಲಾಗಿದೆ. ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಹಾಗೂ ದೇಶಾದ್ಯಂತ ಇಳಿಮುಖವಾಗಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಆದೇಶ ವಾಪಸ್ ಪಡೆಯಲಾಗಿದೆ.

Comments are closed.