ಮುಂಬೈ

ಮಲಾಡ್ ಕನ್ನಡ ಸಂಘದ ವತಿಯಿಂದ ಪ್ರತಿಭಾ ಸ್ಪರ್ಧೆ

Pinterest LinkedIn Tumblr

DSCN0155

ಮುಂಬಯಿ : ಮಲಾಡ್ ಕನ್ನಡ ಸಂಘದ ವತಿಯಿಂದ ತುಳು – ಕನ್ನಡ ಮಕ್ಕಳಿಗಾಗಿ ಪ್ರತಿಭಾ ಸ್ಪರ್ಧೆಯು ಮಲಾಡ್ ಪಶ್ಚಿಮದ ಜನಕಲ್ಯಾಣ ನಗರದ ಸೈಂಟ್ ಜೂಡ್ ಹೈಸ್ಕೂಲ್ ಸಭಾಗೃಹದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಹರೀಶ್ ಎನ್ ಶೆಟ್ಟಿಯವರು ವಹಿಸಿದ್ದು ಈ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಪಾಲಕರು ಪ್ರೋತ್ಸಾಹಿಸಬೇಕಾಗಿದೆ ಎಂದರು.

DSCN0154

DSCN0148

ಮುಖ್ಯ ಅತಿಥಿಯಾಗಿ ಬಿಲ್ಲವರ ಅಶೋಷಿಯೇಶನಿನ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಡಿ. ಪೂಜಾರಿಯವರು ಉಪಸ್ಥಿತರಿದ್ದು ಮಾತನಾಡುತ್ತಾ ಕನ್ನಡ ಕಲಿಯುವ ಮಕ್ಕಳನ್ನು ಪ್ರೋತ್ಸಾಹಿಸುದರೊಂದಿಗೆ ನಮ್ಮ ನಾಡಿನ ಸಂಸ್ಕೃತಿಯನ್ನು ಬೆಳೆಸಬೇಕೆಂದರು. ಗೌರವ ಅತಿಥಿಯಾಗಿ ಬಾಲಕೃಷ್ಣ ಬಿ ಶೆಟ್ಟಿಯವರು ಆಗಮಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಸಂಘದ ಗೌರವ ಅಧ್ಯಕ್ಷ ಪದ್ಮನಾಭ ಪಯ್ಯಡೆ ಮತ್ತಿತರ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಗೌ. ಕಾರ್ಯದರ್ಶಿ ಶಂಕರ ಡಿ. ಪೂಜಾರಿ ಸ್ವಾಗತಿಸಿ ವಂದಿಸಿದರು. ಮಹಿಳಾ ವಿಭಾಗದ ಕಾರ್ಯದರ್ಶಿ ಶಾಂಭವಿ ಪೂಜಾರಿ ಕಾರ್ಯಕ್ರಮವನ್ನು ನಿರೂಪಿಸಿದರು.

ವರದಿ : ಈಶ್ವರ ಎಂ. ಐಲ್
ಚಿತ್ರ,: ದಿನೇಶ್ ಕುಲಾಲ್

Write A Comment