ಮುಂಬೈ

ವರುಣನ ಆರ್ಭಟದಿಂದ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

Pinterest LinkedIn Tumblr

rain in mumbay

ಮುಂಬೈ, ಜೂ.23: ವರುಣನ ಆರ್ಭಟದಿಂದ ಮುಂಬೈನಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ರೈಲು ಹಾಗೂ ವಿಮಾನ ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ. ಈ ನಗರವೆಲ್ಲ ಜಲಾವೃತವಾಗಿದ್ದು, ಮಹಾನಗರ ಪಾಲಿಕೆಯವರು ಸುಗಮ ಸಂಚಾರಕ್ಕೆ ಹರಸಾಹಸ ಪಡುತ್ತಿದ್ದಾರೆ.

ಭೂ ಕುಸಿತದಿಂದ ಐವರು ಮೃತಪಟ್ಟಿದ್ದು, ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಸಿಕ್ಕವರ ರಕ್ಷಣೆ ಮಾಡಲಾಗುತ್ತಿದೆ. ಅಗ್ನಿಶಾಮಕ ದಳ ಸೇರಿದಂತೆ ಪೊಲೀಸರು, ಪಾಲಿಕೆ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಆದೇಶದ ಮೇರೆಗೆ ಬೃಹತ್ ಮುಂಬೈ ಪಾಲಿಕೆ ಆಯುಕ್ತ ರಾಕೇಶ್ ಮರಿಯಾ ನಷ್ಟದ ಬಗ್ಗೆ ವಿಸ್ತೃತ ವರದಿಯೊಂದನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ.

Write A Comment