ಮುಂಬೈ: ಪುಣೆ- ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 17 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಗ್ಗೆ 5 ಗಂಟೆಯ ವೇಳೆ ರಾಯ್ಘಡ್ ಜಿಲ್ಲೆಯ ಸುಖಪುರದಲ್ಲಿ ಖಾಸಗಿ ಬಸ್ ಮತ್ತು ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ನಡೆದಿದೆ. ಈ ಘಟನೆಯಲ್ಲಿ 1 ಮಗು, 10 ಪುರುಷರು ಮತ್ತು 6 ಮಹಿಳೆಯರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 33ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಆಸ್ಪತ್ರಗೆ ದಾಖಲಿಸಲಾಗಿದೆ.
ಸತರಾದಿಂದ ಮುಂಬೈಗೆ ವೇಗವಾಗಿ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಆರಂಭದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದು 20 ಅಡಿ ಕಂದಕಕ್ಕೆ ಉರುಳಿದೆ.
Comments are closed.