ಮುಂಬೈ: ಬಿಜೆಪಿಯ ಬಹುಕಾಲದ ಮಿತ್ರ ಪಕ್ಷ ಶಿವಸೇನೆ ಮುಂಬರುವ ವಿಧಾನಸಭೆ ಹಾಗೂ 2019ರ ಲೋಕಸಭೆಯ ಚುನಾವಣೆಯನ್ನು ಸ್ವತಂವಾಗಿ ಎದುರಿಸಲು ನಿರ್ಧರಿಸಿದೆ.
ಮಂಗಳವಾರ ಇಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಮಾತನಾಡಿದ ಪಕ್ಷದ ಹಿರಿಯ ನಾಯಕ ಸಂಜಯ್ ರೌತ್ ಈ ನಿರ್ಧಾರವನ್ನು ತಿಳಿಸಿದರು. ಆದರೆ, ಸದ್ಯ ಬಿಜೆಪಿಗೆ ನೀಡಿರುವ ಬೆಂಬಲವನ್ನು ಪಕ್ಷ ಮುಂದು ವರಿಸಲಿದೆ. ಒಂದು ವೇಳೆ ಬೆಂಬಲವನ್ನು ಹಿಂತೆಗೆದುಕೊಂಡರೆ ಮಹಾರಾಷ್ಟ್ರದ ದೇವೇಂದ್ರ ಫಡ್ನವಿಸ್ ಸರ್ಕಾರ ಅಲ್ಪ ಮತಕ್ಕೆ ಕುಸಿಯುತ್ತದೆ.
ಮುಂಬರುವ ಲೋಕ ಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಎಲ್ಲ ರಾಜ್ಯದಿಂದ ಸ್ವತಂತ್ರವಾಗಿ ಸ್ಪರ್ಧೆಗೆ ಇಳಿಯಲಿದೆ ಎಂದು ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ ಹೇಳಿದರು.
ಕಾರ್ಯಕಾರಿಣಿ ಸಭೆಯಲ್ಲಿ ಉದ್ಧವ್ ಠಾಕ್ರೆಯವರ ಪುತ್ರ ಆದಿತ್ಯ ಠಾಕ್ರೆಯನ್ನು ಕಾರ್ಯಕಾರಿಣಿಯ ಸದಸ್ಯರನ್ನಾಗಿ ನೇಮಿಸಲಾಯಿತು. ಮಧ್ಯಾಹ್ನ ನಡೆಯಲಿರುವ ಕಾರ್ಯಕ್ರಮದಲ್ಲಿ ಉದ್ಧವ್ ಠಾಕ್ರೆ ಪಕ್ಷದ ಅಧ್ಯಕ್ಷರಾಗಿ ಮರು ಆಯ್ಕೆ ಆಗಲಿದ್ದಾರೆ.
Comments are closed.