ಮುಂಬೈ

ಪುಣೆಯ ಫುಟ್‌ಪಾತ್‌ನಲ್ಲಿ ವಾಸವಿದ್ದ ಮಾಜಿ ಸೇನಾ ಕ್ಯಾಪ್ಟನ್ ಹತ್ಯೆ

Pinterest LinkedIn Tumblr

ಪುಣೆ: ಭಾರತೀಯ ಸೇನೆಯಲ್ಲಿ ಕ್ಯಾಪ್ಟನ್ ಆಗಿ ಕಾರ್ಯನಿರ್ವಹಿಸಿಸ್ದ್ದ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಮಾಜಿ ಕ್ಯಾಪ್ಟನ್ ರವೀಂದ್ರ ಬಲಿ (67) ಹತ್ಯೆಗೊಳಗಾದ ಕ್ಯಾಪ್ಟನ್ ಆಗಿದ್ದು ಈತ ಕೆಲ ವರ್ಷಗಳಿಂದ ಕುಟುಂಬದಿಂದ ಬೇರಾಗಿ ರಸ್ತೆ ಬದಿಯ ಸಣ್ಣ ಟೆಂಟ್ ನಲ್ಲಿ ವಾಸವಿದ್ದರು. ನಿನ್ನೆ (ಗುರುವಾರ) ರಾತ್ರಿ ಇಬ್ಬರು ದುಷ್ಕರ್ಮಿಗಳು ಅವರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.

ರವೀಂದ್ರ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ಕಂಡ ಸ್ಥಳೀಯ ಭದ್ರತಾ ಸಿಬ್ಬಂದಿಯೊಬ್ಬರು ಈ ಕುರಿತು ಪೋಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೋಲೀಸರು ಮೃತ ರವೀಂದ್ರ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ.

ಪುಣೆಯ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ರವೀಂದ್ರ ಅವರ ಕುಟುಂಬಸ್ಥರ ಬಗೆಗೆ ಪೋಲೀಸರು ಮಾಹಿತಿ ಕಲೆಹಾಕಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೋಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

Comments are closed.