ಮುಂಬೈ

ಮಹಾರಾಷ್ಟ್ರದ ಸಿಎಂ ಆಗಿ ಶಿವಸೇನೆಯ ಉದ್ದವ್ ಠಾಕ್ರೆ ಪ್ರಮಾಣ ವಚನಕ್ಕೆ ಗ್ರೀನ್ ಸಿಗ್ನಲ್

Pinterest LinkedIn Tumblr

ಮುಂಬೈ : ಮತ್ತೆ ಮಹಾರಾಷ್ಟ್ರದ ಸಿಎಂ ಆಗಿದ್ದಂತ ಬಿಜೆಪಿ ದೇವೇಂದ್ರ ಫಡ್ನವೀಸ್, ಸುಪ್ರೀಂ ಕೋರ್ಟ್ ನಾಳೆ ಬಹುಮತ ಸಾಭೀತುಪಡಿಸುವಂತೆ ಡೆಡ್ ಲೈನ್ ನೀಡಿದ್ದಕ್ಕೆ ಸಾಭೀತು ಪಡಿಸಲು ಆಗದೇ ಇಂದು ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಶಿವಸೇನೆ, ಕಾಂಗ್ರೆಸ್ ಹಾಗೂ ಎನ್ ಸಿ ಪಿ ಮೈತ್ರಿ ಪಕ್ಷದ ಸರ್ಕಾರ ನಾಳೆ ಮಹಾರಾಷ್ಟ್ರದಲ್ಲಿ ಅಸ್ಥಿತ್ವಕ್ಕೆ ಬರಲಿದ್ದು, ಸಿಎಂ ಆಗಿ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ದಿಢೀರ್ ಬೆಳವಣಿಗೆ ಎನ್ನುವಂತೆ ಮಹಾರಾಷ್ಟ್ರದಲ್ಲಿ ಬಿಜೆಪಿ – ಎನ್ ಸಿ ಪಿ ನೇತೃತ್ವದ ಮೈತ್ರಿ ಸರ್ಕಾರ ರಚನೆಯಾಗಿತ್ತು. ಈ ಮೂಲಕ ಮತ್ತೆ ಮಹಾರಾಷ್ಟ್ರ ಸಿಎಂ ಆಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಪ್ರಮಾಣವಚನ ಸ್ವೀಕರಿಸಿದ್ದರೇ, ಡಿಸಿಎಂ ಆಗಿ ಎನ್ ಸಿ ಪಿಯ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದರು.

ಈ ಎಲ್ಲಾ ಬೆಳವಣಿಗೆಯ ನಂತ್ರ, ಕಾಂಗ್ರೆಸ್, ಎನ್ ಸಿ ಪಿ ಮತ್ತು ಶಿವಸೇನೆ ಮಹಾರಾಷ್ಟ್ರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅಲ್ಲದೇ ರಾಜ್ಯಪಾಲರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಿತ್ತು. ಇಂತಹ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ನಾಳೆ ಸಿಎಂ ದೇವೇಂದ್ರ ಫಡ್ನವೀಸ್ ಅವರಿಗೆ ಬಹುಮತ ಸಾಭೀತು ಪಡಿಸಲು ಡೆಡ್ ಲೈನ್ ನೀಡಿದ್ದರು. ಇದರ ಮಧ್ಯೆ ಡಿಸಿಎಂ ಅಜಿತ್ ಪವಾರ್ ಕೂಡ ರಾಜೀನಾಮೆ ಸಲ್ಲಿಸಿದ್ದರು.

ಈ ಬಳಿಕ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ತಾವು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಘೋಷಣೆ ಮಾಡಿದ್ದರು. ಅಲ್ಲದೇ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಕೂಡ ಸಲ್ಲಿಸಿದ್ದರು. ಈ ಬೆಳವಣಿಗೆಯ ನಂತ್ರ ಇದೀಗ ಮಹಾರಾಷ್ಟ್ರದ ಸಿಎಂ ಆಗಿ ಶಿವಸೇನೆಯ ಉದ್ದವ್ ಠಾಕ್ರೆ ಪ್ರಮಾಣ ವಚನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನಾಳೆ ಮಹಾರಾಷ್ಟ್ರದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Comments are closed.