ಹೊಸದಿಲ್ಲಿ, ಅ.4: ವೆಸ್ಟ್ಇಂಡೀಸ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಮೂರು ಪಂದ್ಯಗಳಿಗೆ ಇಂದು ಬಿಸಿಸಿಐ 14 ಸದಸ್ಯರನ್ನು ಒಳಗೊಂಡಿರುವ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ಆಫ್-ಸ್ಪಿನ್ನರ್ ಆರ್. ಅಶ್ವಿನ್ರನ್ನು ಕೈಬಿಟ್ಟು ಯುವ ಸ್ಪಿನ್ನರ್ ಕುಲ್ದೀಪ್ ಯಾದವ್ಗೆ ಮೊದಲ ಬಾರಿ ಅವಕಾಶ ಕಲ್ಪಿಸಲಾಗಿದೆ.
ಇನ್ನಷ್ಟೇ ಪ್ರಥಮ ದರ್ಜೆ ಕ್ರಿಕೆಟನ್ನು ಆಡಬೇಕಾಗಿರುವ ಕುಲ್ದೀಪ್ ಅಂಡರ್-19 ವಿಶ್ವಕಪ್ನಲ್ಲಿ ಪ್ರಸಿದ್ದಿಗೆ ಬಂದಿದ್ದರು. ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಅ.8 ರಿಂದ ಆರಂಭವಾಗಲಿರುವ ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಗಾಯಗೊಂಡಿರುವ ರೋಹಿತ್ ಶರ್ಮಬದಲಿಗೆ ಮುರಳಿ ವಿಜಯ್ ಆಯ್ಕೆಯಾಗಿದ್ದಾರೆ. ಆರಂಭಿಕ ಆಟಗಾರ ಶಿಖರ್ ಧವನ್ ಹಾಗೂ ವೇಗದ ಬೌಲರ್ ಉಮೇಶ್ ಯಾದವ್ ತಮ್ಮ ಸ್ಥಾನ ಉಳಿಸಿಕೊಂಡಿದ್ದಾರೆ. ಭಾರತದ ಏಕದಿನ ತಂಡ: ಎಂ.ಎಸ್. ಧೋನಿ(ನಾಯಕ), ಶಿಖರ್ ಧವನ್, ಅಜಿಂಕ್ಯ ರಹಾನೆ, ವಿರಾಟ್ ಕೊಹ್ಲಿ, ಸುರೇಶ್ ರೈನಾ, ಅಂಬಟಿ ರಾಯುಡು, ರವೀಂದ್ರ ಜಡೇಜ, ಅಮಿತ್ ಮಿಶ್ರಾ, ಭುವನೇಶ್ವರ ಕುಮಾರ್, ಮುಹಮ್ಮದ್ ಶಮಿ, ಮೋಹಿತ್ ಶರ್ಮ, ಉಮೇಶ್ ಯಾದವ್, ಮುರಳಿ ವಿಜಯ್, ಕುಲ್ದೀಪ್ ಯಾದವ್.