
ಮುಂಬೈ: 2015ರ ವಿಶ್ವಕಪ್ ಟೂರ್ನಿಗೆ ಭಾರತದ 30 ಸಂಭವನೀಯ ಆಟಗಾರರ ಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ ಪ್ರಕಟಿಸಿದ್ದು, ಟೀ ಇಂಡಿಯಾದ ಐವರು ಹಿರಿಯ ಆಟಗಾರರಿಗೆ ಕೊಕ್ ನೀಡಲಾಗಿದೆ.
ಇಂದು ಮುಂಬೈನಲ್ಲಿ ಆಯ್ಕೆ ಸಮಿತಿ ಅಧ್ಯಕ್ಷ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 30 ಸಂಭವನೀಯ ಆಟಗಾರರ ಆಯ್ಕೆಯನ್ನು ಅಂತಿಮಗೊಳಿಸಲಾಗಿದ್ದು, ಹಿರಿಯ ಆಟಗಾರರಾದ ವಿರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ಜಹೀರ್ ಖಾನ್, ಹರ್ಭಜನ್ ಸಿಂಗ್ ಹಾಗೂ ಗೌತಮ್ ಗಂಭೀರ್ ಅವರನ್ನು ವಿಶ್ವಕಪ್ ಪಂದ್ಯಾವಳಿಯಿಂದ ಹೊರಗಿಡಲಾಗಿದೆ.