ಬೆಂಗಳೂರು, ಜು.9- ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ 53ನೆ ಹುಟ್ಟುಹಬ್ಬದ ಅಂಗವಾಗಿ ಜುಲೈ 13 (ಸೋಮವಾರ)ರಂದು ಸಂಜೆ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ನಡೆಯುವ ಕಾರ್ಯಕ್ರಮ ದಲ್ಲಿ ಹಿರಿಯ ನಿರ್ಮಾಪಕಿ, ಡಾ. ಪಾರ್ವತಮ್ಮ ರಾಜ್ಕುಮಾರ್ರಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ.
ಅಖಿಲ ಕರ್ನಾಟಕ ಡಾ||ಶಿವರಾಜ್ಕುಮಾರ್ ಸೇನಾ ಸಮಿತಿ ಹಾಗೂ ಗಂಡುಗಲಿ ಶಿವರಾಜ್ಕುಮಾರ್ ಅಭಿಮಾನಿಗಳ ಸಂಘ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ನೃತ್ಯ ನಿರ್ದೇಶಕ ಎ.ಹರ್ಷ , ಮೈತ್ರಿಗೌಡ, ಶೃತಿ, ಸ್ಮೈಲ್ಗುರು ರಕ್ಷಿತ್ ನೃತ್ಯ ತಂಡಗಳಿಂದ ನೃತ್ಯ ಪ್ರದರ್ಶನ ಹಾಗೂ ಹಾಸ್ಯ ನಟ ತಬಲನಾಣಿಯವರಿಂದ ಹಾಸ್ಯ ಪ್ರದರ್ಶನ ಏರ್ಪಡಿಸಲಾಗಿದೆ.
ಮುಖ್ಯ ಅತಿಥಿಗಳಾಗಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಥಾಮಸ್ ಡಿಸೋಜಾ, ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ಬಾಬು, ಅಖಿಲ ಕರ್ನಾಟಕ ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು, ನಟರಾದ ಪುನೀತ್ರಾಜ್ಕುಮಾರ್, ರಾಘವಂದ್ರರಾಜ್ಕುಮಾರ್, ಜಗ್ಗೇಶ್ , ಗಣೇಶ್, ದುನಿಯಾ ವಿಜಯ್, ಸುಧಾರಾಣಿ, ನಿರ್ಮಾಪಕರಾದ ರಾಮು, ಎನ್.ಸುರೇಶ್, ಕನಕಪುರ ಶ್ರೀನಿವಾಸ್, ಎಸ್.ವಿ.ಬಾಬು, ಕೆ.ಪಿ.ಶ್ರೀಕಾಂತ್, ಬಿ.ಪಿ.ತ್ಯಾಗರಾಜ್, ಬಿ.ಎಸ್.ಸುಧೀಂದ್ರ ಮತ್ತಿತರರ ಗಣ್ಯರು ಆಗಮಿಸಲಿದ್ದಾರೆ. ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿ ಯಶಸ್ವಿಗೊಳಿಸಬೇಕೆಂದು ಸಮಿತಿಯ ರಾಜ್ಯಾಧ್ಯಕ್ಷ ಟಿ.ನಾರಾಯಣ್ ಹಾಗೂ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.