ಮನೋರಂಜನೆ

ರಾಯಚೂರಿನಲ್ಲಿ ನಡೆಯಲಿರುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬರಗೂರು

Pinterest LinkedIn Tumblr

baraguru-ramachandrappa

ದೆಹಲಿ: ರಾಯಚೂರಿನಲ್ಲಿ ನಡೆಯಲಿರುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಕಸಾಪ ಕಾರ್ಯಕಾರಿಣಿಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಡಿಸೆಂಬರ್ 2, 3, 4 ರಂದು ರಾಯಚೂರಿನಲ್ಲಿ ಸಮ್ಮೇಳನ ನಡೆಯಲಿದೆ. ಸಮ್ಮೇಳನಕ್ಕೆ ಸರ್ಕಾರ ನಾಲ್ಕು ಕೋಟಿ ರೂ. ನೀಡಲಿದೆ.

ಪ್ರೊ.ಬರಗೂರು ರಾಮಚಂದ್ರಪ್ಪ ಸಾಹಿತ್ಯ ಮತ್ತು ಚಲನಚಿತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದವರು. 1947 ರ ಅಕ್ಟೋಬರ್ 18 ರಂದು ತುಮಕೂರಿನ ಶಿರಾ ತಾಲ್ಲೂಕಿನ ಬರಗೂರು ಗ್ರಾಮದಲ್ಲಿ ಜನನ. ತಂದೆ ರಂಗದಾಸಪ್ಪ, ತಾಯಿ ಕೆಂಚಮ್ಮ. ಬರಗೂರು ಅವರು ಕವಿ, ಕಾದಂಬರಿಕಾರ, ವಿಮರ್ಶಕ, ಚನಲಚಿತ್ರ ನಿರ್ದೇಶಕ ಹೀಗೆ ಹಲವು ಪ್ರಕಾರಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

Comments are closed.