ಮನೋರಂಜನೆ

ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ಗೆ ಸುಪ್ರೀಂ ನೋಟಿಸ್‌

Pinterest LinkedIn Tumblr

salmanನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ರಾಜಸ್ತಾನ ಸರ್ಕಾರ ಸಲ್ಮಾನ್ ಖಾನ್ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಗೆ ಒಪ್ಪಿಗೆ ಸೂಚಿಸಿರುವ ಸುಪ್ರೀಂ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೆ ಮಾಡಿದೆ. ಇದರಿಂದ ಸಲ್ಮಾನ್‌ ಖಾನ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ.

1998ರಲ್ಲಿ ರಾಜಸ್ತಾನದ ಜೋದ್‌ಪುರದಲ್ಲಿರುವ ಕಂಕಣಿ ಎಂಬ ಅರಣ್ಯ ಪ್ರದೇಶದಲ್ಲಿ ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆಯಾಡಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.

ಸಲ್ಮಾನ್ ಖಾನ್‌ ಅವರು ಸಿನಿಮಾವೊಂದರ ಚಿತ್ರಿಕರಣಕ್ಕಾಗಿ ಅಲ್ಲಿಗೆ ತೆರಳಿದ್ದರು.

Comments are closed.