2014ರಲ್ಲಿ ಕರಿಯಾ ಕಣ್ಣ್ ಬಿಟ್ಟ ಚಿತ್ರವನ್ನು ನಿರ್ದೇಶಿಸಿದ್ದ ಕವಿತಾ ಲಂಕೇಶ್ ಮತ್ತೆ ನಿರ್ದೇಶನಕ್ಕೆ ಮರಳಿಸಿದ್ದಾರೆ.
ಕವಿತಾ ಲಂಕೇಶ್ ಇಲ್ಲಿಯವರೆಗೂ ಏಳು ಚಿತ್ರಗಳನ್ನು ನಿರ್ದೇಶಿಸಿದ್ದು, ಎಂಟನೇ ಚಿತ್ರದ ನಿರ್ದೇಶನಕ್ಕೆ ಮುಂದಾಗಿರುವ ಕವಿತಾ ಚಿತ್ರದ ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದಾರೆ. ಇನ್ನು ಹೆಸರಿಡದ ಈ ಚಿತ್ರವನ್ನು ಸುಧೀಕ್ಷಾ ಮೂವೀಸ್ ಲಾಂಛನದ ಅಡಿಯಲ್ಲಿ ಸುಬ್ರಹ್ಮಣ್ಯ ಶರ್ಮಾ ಅವರು ನಿರ್ಮಿಸುತ್ತಿದ್ದಾರೆ. ಕೇಸ್ ನಂ 18/7 ಚಿತ್ರ ನಾಯಕ ನಿರಂಜನ್ ಕುಮಾರ್ ಶೆಟ್ಟಿ ಈ ಚಿತ್ರದಲ್ಲಿ ನಾಯಕನಾಗಿ ನಟಿಸಲಿದ್ದಾರೆ.
ಕವಿತಾ ತಮ್ಮ ಚಿತ್ರಕ್ಕಾಗಿ ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆಯಲ್ಲಿ ಬ್ಯುಸಿಯಾಗಿದ್ದು, ಮಾರ್ಚ್ ತಿಂಗಳಲ್ಲಿ ಚಿತ್ರೀಕರಣಕ್ಕೆ ಚಾಲನೆ ದೊರೆಯಲಿದೆ.
ಮನೋರಂಜನೆ
Comments are closed.