ಧಾರವಾಡ: ಅಲ್ಲಮ ಚಲನಚಿತ್ರ ಬಿಡುಗಡೆಗೆ ಬಸವಪೀಠದ ಚನ್ನಬಸವಾನಂದ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದಾರೆ.
‘ನಾಗಾಭರಣ ನಿರ್ದೇಶನದ ‘ಅಲ್ಲಮ’ ಚಿತ್ರದಲ್ಲಿ ಅನೇಕ ದೋಷಗಳಿವೆ. ಚಿತ್ರದಲ್ಲಿ ವಚನ ಸಾಹಿತ್ಯಕ್ಕೆ ಧಕ್ಕೆ ಮಾಡಿದ್ದಾರೆ. ಈ ಚಿತ್ರದ ಬಿಡುಗಡೆಗೆ ರಾಜ್ಯ ಸರ್ಕಾರ ತಡೆ ಹಾಕಬೇಕು. ಇಲ್ಲವಾದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು’ ಎಂದು ಸ್ವಾಮೀಜಿ ಹೇಳಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಸ್ವಾಮೀಜಿ ಬುಧವಾರ ಒಂದು ದಿನ ಧರಣಿ ನಡೆಸಿದ್ದಾರೆ.
Comments are closed.