
ಹೊಸದಿಲ್ಲಿ: ತೀವ್ರ ಪ್ರತಿಭಟನೆ ಹಾಗೂ ಸೆನ್ಸಾರ್ ಮಂಡಳಿ ಕೆಂಪು ನಿಶಾನಯಿಂದ ಕಂಗೆಟ್ಟಿರುವ ಪದ್ಮಾವತಿ ಚಿತ್ರ ನಿರ್ಮಾಪಕರು ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ವಯಾಕಾಮ್ 18 ಸಂಸ್ಥೆ ನಿರ್ಮಾಣದ ಪದ್ಮಾವತಿ ಚಿತ್ರ ಡಿಸೆಂಬರ್ 1ರಂದು ಬಿಡುಗಡೆಯಾಗಬೇಕಿತ್ತು.
ಆದರೆ ಈ ಐತಿಹಾಸಿಕ ಕಥಾನಕ ಚಿತ್ರದಲ್ಲಿ ರಾಣಿ ಪದ್ಮಾವತಿಯನ್ನು ಅವಹೇಳನ ಮಾಡಲಾಗಿದೆ. ಅಲ್ಲದೇ ಅಲ್ಲಾವುದ್ದೀನ್ ಖಿಲ್ಜಿ ಮತ್ತು ಪದ್ಮಾವತಿ ನಡುವೆ ರೊಮ್ಯಾನ್ಸ್ ಆಗಿದೆ ಎಂಬ ರೀತಿಯಲ್ಲಿ ಚಿತ್ರದಲ್ಲಿ ತೋರಿಸಲಾಗಿದೆ ಎಂದು ರಜಪೂತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ, ದೀಪಿಕಾ ಪಡುಕೋಣೆ ವಿರುದ್ಧ ಕಿಡಿಕಾರಿರುವ ರಜಪೂತರು ಇಬ್ಬರ ಮೇಲೂ ಹಲ್ಲೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
ರಜಪೂತ ಸಂಘಟನೆಯೊಂದು ದೀಪಿಕಾ ಪಡುಕೋಣೆ ಮೂಗು ಕತ್ತರಿಸುವ ಬೆದರಿಕೆ ಒಡ್ಡಿದೆ. ದೀಪಿಕಾ, ಸಂಜಯ್ ಲೀಲಾ ಬನ್ಸಾಲಿ ಅವರನ್ನು ಹತ್ಯೆ ಮಾಡಿದರೆ ಐದು ಕೋಟಿ ರೂಪಾಯಿ ನೀಡುವುದಾಗಿ ಕೆಲವು ಸಂಘಟನೆ ಘೋಷಿಸಿತ್ತು.
ರಾಜಸ್ಥಾನ ಮುಖ್ಯಮಂತ್ರಿ ವಸುಂಧರ ರಾಜೇ ಕೂಡ ಕೇಂದ್ರಕ್ಕೆ ಪತ್ರ ಬರೆದಿದ್ದು, ಕೆಲವು ಬದಲಾವಣೆ ಮಾಡಲು ಚಿತ್ರ ತಂಡಕ್ಕೆ ಸೂಚಿಸಬೇಕೆಂದು ಮನವಿ ಮಾಡಿದ್ದಾರೆ.
ಸೆನ್ಸಾರ್ ಮಂಡಳಿ ಕೂಡ ಪದ್ಮಾವತಿ ಚಿತ್ರ ಬಿಡುಗಡೆಗೆ ಹಸಿರು ನಿಶಾನೆ ತೋರಲು ನಿರಾಕರಿಸಿದೆ.
ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ಚಿತ್ರ ನಿರ್ಮಾಪಕರು ಬಿಡುಗಡೆ ದಿನಾಂಕವನ್ನು ಮುಂದೂಡಿದ್ದಾರೆ. ಮುಂದಿನ ದಿನಗಳಲ್ಲಿ ಬಿಡುಗಡೆ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
Comments are closed.