ಮನೋರಂಜನೆ

ಶ್ರೀದೇವಿ ಸಾವಿಗೆ ಸಂತಾಪ ಸೂಚಿಸಿ ಪೇಚಿಗೆ ಸಿಲುಕಿದ ಕಾಂಗ್ರೆಸ್‌

Pinterest LinkedIn Tumblr


ನವದೆಹಲಿ: ಬಾಲಿವುಡ್‌ ದಂತಕತೆ ನಟಿ ಶ್ರೀದೇವಿ ಸಾವಿಗೆ ಸಂತಾಪ ಸೂಚಿಸಿರುವ ಕಾಂಗ್ರೆಸ್‌ ಟ್ವೀಟ್‌ ಮಾಡಿ ಇದೀಗ ಪೇಚಿಗೆ ಸಿಲುಕಿದೆ.

ಶ್ರೀದೇವಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಕಾಂಗ್ರೆಸ್‌, ಶ್ರೀದೇವಿ ಅವರ ನಿಧನದ ವಾರ್ತೆ ಕೇಳಲು ವಿಷಾದಿಸುತ್ತೇವೆ. ಅವರು ನಮ್ಮ ಹೃದಯದಲ್ಲಿ ಸದಾ ನೆಲೆಸಿರುತ್ತಾರೆ. ಯುಪಿಎ ಸರ್ಕಾರ 2013 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದು ಟ್ವೀಟ್ ಮಾಡಿತ್ತು.

ಆದರೆ ನಂತರ ಟ್ವಿಟರ್ ಕೆಲವರು ಕಾಂಗ್ರೆಸ್‌ ಸಾವಿನಲ್ಲಿಯೂ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಭಾರಿ ಸಂಖ್ಯೆಯಲ್ಲಿ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಆ ಟ್ವೀಟ್‌ನ್ನು ತೆಗೆದುಹಾಕಿದೆ.

ಈ ನಡುವೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು, ಶ್ರೀದೇವಿ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ಶ್ರೀದೇವಿ ಅವರ ಸಾವಿನ ಸುದ್ದಿ ಕೇಳಿ ಆಘಾತವಾದಂತಾಗಿದೆ. ಬಹುಭಾಷಾ ನಟಿಯಾಗಿದ್ದ ಅವರು ಅದ್ಭುತ ಪ್ರತಿಭೆಯಿಂದಾಗಿ ತಮ್ಮ ನಟನೆಯನ್ನು ಎಲ್ಲೆಡೆ ಪಸರಿಸಿದ್ದರು ಎಂದು ಟ್ವೀಟ್‌ ಮಾಡಿದ್ದಾರೆ.

Comments are closed.