ಜೈಪುರ: ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಅವರ ವಿರುದ್ದದ ಪೊಲೀಸ್ ತನಿಖೆಗೆ ರಾಜಸ್ಥಾನ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
‘ಟೈಗರ್ ಜಿಂದಾ ಹೇ’ ಸಿನಿಮಾ ಪ್ರಚಾರ ಕಾರ್ಯಕ್ರಮದಲ್ಲಿ ಜಾತಿ ನಿಂದನೆ ಮಾಡಿದ ಸಲ್ಮಾನ್, ನಟಿ ಕತ್ರಿನಾ ಕೈಫ್ ಹಾಗೂ ಇತರರ ವಿರುದ್ಧ ಎಫ್ ಐಆರ್ ದಾಖಲಿಸಬೇಕು ಎಂದು ಕೋರಿ ಫೆ.22ರಂದು ದೆಹಲಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ವಿಚಾರಣೆ ಫೆ.27ಕ್ಕೆ ನಿಗದಿಯಾಗಿದೆ.
ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವೊಂದರ ಭಾವನೆಗಳಿಗೆ ಧಕ್ಕೆಯಾಗುವಂಥ ಮಾತ ನ್ನಾಡಿದ್ದಾರೆ ಎಂದು ಆರೋಪಿಸಿ ದೆಹಲಿಯ ಹರ್ನಾಮ್ ಸಿಂಗ್ ಎಂಬವರು ದೂರು ದಾಖಲಿಸಿದ್ದಾರೆ. ಇನ್ನು ಇದೇ ವಿಷಯ ಮುಂದಿಟ್ಟುಕೊಂಡು ಜೈಪುರದಲ್ಲಿ ವಾಲ್ಮೀಕಿ ಸಮು ದಾಯವೂ ಸಲ್ಮಾನ್ ವಿರುದ್ಧ ದೂರು ದಾಖಲಿಸಿತ್ತು.
Comments are closed.