
ಮುಂಬಯಿ: ಕಳೆದ ಶನಿವಾರ ಮೃತಪಟ್ಟ ಮೋಹಕ ತಾರೆ ಶ್ರೀದೇವಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಬುಧವಾರ ನೆರವೇರಿತು.
ಸಾವಿರಾರು ಅಭಿಮಾನಿಗಳು, ಗಣ್ಯರು, ಆಪ್ತರ ಸಮ್ಮುಖದಲ್ಲಿ ಮುಂಬಯಿಯ ವಿಲ್ಲೆ ಪಾರ್ಲೆಯ ಹಿಂದೂ ಸೇವಾ ಸಮಾಜದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು.

ಶ್ರೀದೇವಿ ಪತಿ ಬೋನಿ ಕಪೂರ್ ಅವರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಅಯ್ಯಂಗಾರ್ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿತು.
ಇದಕ್ಕೂ ಮುನ್ನ ಸುಮಾರು ಏಳು ಕಿಲೋ ಮೀಟರ್ವರೆಗೆ ಮೆರವಣಿಗೆಯ ಮೂಲಕ ಶ್ರೀದೇವಿ ಪಾರ್ಥಿವ ಶರೀರವನ್ನು ವಿಲ್ಲೆಪಾರ್ಲೆಯ ಸೇವಾ ಸಮಾಜ ಹಿಂದೂ ಚಿತಾಗಾರಕ್ಕೆ ಕರೆತರಲಾಯಿತು. ಸಾವಿರಾರು ಅಭಿಮಾನಿಗಳು ದಾರಿಯುದ್ದಕ್ಕೂ ಶ್ರೀದೇವಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.




ಶನಿವಾರ ದುಬೈನಲ್ಲಿ ಮೃತಪಟ್ಟ ಶ್ರೀದೇವಿ ಶರೀರವನ್ನು ಮಂಗಳವಾರ ರಾತ್ರಿ ಮುಂಬಯಿಗೆ ಕರೆ ತರಲಾಯಿತು. ಬಾಲಿವುಡ್ ಸೂಪರ್ ಸ್ಟಾರ್ ಶ್ರೀದೇವಿ ಅಂತಿಮ ದರ್ಶನ ಪಡೆಯಲು ಸಾವಿರಾರು ಅಭಿಮಾನಿಗಳು, ಸೆಲೆಬ್ರಿಟಿಗಳು ಅವರ ನಿವಾಸಕ್ಕೆ ಆಗಮಿಸಿದರು. ಶ್ರೀದೇವಿ ಅಂತ್ಯಕ್ರಿಯೆಗೆ ಸಿನಿರಂಗದ ತಾರಾಗಣವೇ ಆಗಮಿಸಿದೆ.
ಶ್ರೀದೇವಿ ಪಾರ್ಥಿವ ಶರೀರ ಅಂಧೇರಿಯ ದಿ ಸೆಲೆಬ್ರೇಷನ್ ಸ್ಪೋರ್ಟ್ಸ್ ಕ್ಲಬ್ಗೆ ರವಾನೆ ಮಾಡಿ ಸಾರ್ವಜನಿಕ ವೀಕ್ಷಣೆಗೆ ಇಡಲಾಯಿತು.



ತಮ್ಮ ಅಭಿಮಾನ ತಾರೆ ಶ್ರೀದೇವಿ ಅಂತಿಮ ದರ್ಶನಕ್ಕಾಗಿ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಆಗಮಿಸಿದ್ದು ಮುಂಬೈನಲ್ಲಿನ ಸೆಲಬ್ರೇಷನ್ ಸ್ಫೋರ್ಟ್ಸ್ ಕ್ಲಬ್ ಮುಂದೆ ಜನ ಸಾಲುಗಟ್ಟಿ ನಿಂತು, ತಮ್ಮ ನೆಚ್ಚಿನ ನಟಿಯ ದರ್ಶನ ಪಡೆದರು.
ಬುಧವಾರ ಬೆಳಗ್ಗೆ 9.30ಕ್ಕೆ ಶ್ರೀದೇವಿ ಪಾರ್ಥಿವ ಶರೀರವನ್ನು ಸೆಲಬ್ರೇಷನ್ ಸ್ಫೋರ್ಟ್ಸ್ ಕ್ಲಬ್ಗೆ ತರಲಾಗಿತ್ತು. ಮಧ್ಯಾಹ್ನ 12.30 ಗಂಟೆವರೆಗೂ ಪಾರ್ಥಿವ ಶರೀರವನ್ನು ಅಲ್ಲೇ ಸಾರ್ವಜನಿಕ ವೀಕ್ಷಣೆಗೆ ಇಡಲಾಗಿತ್ತು.




ಮಂಗಳವಾರ ರಾತ್ರಿ ಶ್ರೀದೇವಿ ಪಾರ್ಥಿವ ಶರೀರವನ್ನು ಮುಂಬೈ ಲೋಖಂಡವಲಾದಲ್ಲಿನ ಗ್ರೀನ್ ಎಕರ್ಸ್ ನಿವಾಸಕ್ಕೆ ತರುತ್ತಿದ್ದಂತೆ ರಸ್ತೆಯ ಇಕ್ಕೆಲಗಳು ಜನಸಂದಣಿಯಿಂದ ತುಂಬಿದ್ದವು, ಕೆಲವು ಅಭಿಮಾನಿಗಳು ಮರಗಳನ್ನು ಹತ್ತಿ ಅಂತಿಮ ದರ್ಶನ ಪಡೆಯುತ್ತಿರುವ ದೃಶ್ಯಗಳನ್ನು ಸಾಮಾನ್ಯವಾಗಿತ್ತು.
ಶ್ರೀದೇವಿ ಆಸೆಯಂತೆಯೇ ಮೃತದೇಹಕ್ಕೆ ಚಿನ್ನ ಲೇಪಿತ ಕೆಂಪು ಕಾಂಚಿವರಂ ಸೀರೆ ಉಡಿಸಿ, ಮಾಂಗಲ್ಯ ಸರದ ಜೊತೆ ಚಿನ್ನಾಭರಣ ಹಾಕಿ, ಪಾರ್ಥಿವ ಶರೀರಕ್ಕೆ ತ್ರಿವರ್ಣ ಧ್ವಜವನ್ನು ಹೊದಿಸಿ ಮೆರವಣಿಗೆ ಮಾಡಲಾಯಿತು.
ಶ್ರೀದೇವಿಗೆ ಬಿಳಿ ಹೂಗಳೆಂದರೆ ಬಹಳ ಪ್ರೀತಿ. ಹಾಗಾಗಿ ಅವರ ಪಾರ್ಥಿವ ಶರೀರಕ್ಕೆ ಮಲ್ಲಿಗೆ ಹೂ ಮುಡಿಸಲಾಗಿದೆ. ಜೊತೆಗೆ ಅವರ ಅಂತಿಮ ಯಾತ್ರೆಯ ವಾಹನವನ್ನೂ ಕೂಡ ಬಿಳಿ ಹೂಗಳಿಂದ ಸಿಂಗರಿಸಲಾಗಿತ್ತು.
Comments are closed.