ಮನೋರಂಜನೆ

ತನ್ನ ತಾಯಿ ಶ್ರೀದೇವಿಯನ್ನು ಸ್ಮರಿಸಿದ ಪುತ್ರಿ ಜಾನ್ವಿ ಹೇಳಿದ್ದೇನು..?

Pinterest LinkedIn Tumblr

ಮೋಹಕ ತಾರೆ ಶ್ರೀದೇವಿ ನಿಧನದ ಬಳಿಕ ಅವರ ಹಿರಿಯ ಪುತ್ರಿ ಜಾನ್ವಿ ಕಪೂರ್ ಇದೇ ಮೊದಲ ಸಲ ಪ್ರತಿಕ್ರಿಯಿಸಿದ್ದಾರೆ. ಇದೇ ಮಾರ್ಚ್ 7ರಂದು ತನ್ನ 21ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ತನ್ನ ತಾಯಿಯನ್ನು ಸ್ಮರಿಸಿದ್ದಾರೆ. ಇನ್‌ಸ್ಟಾಗ್ರಾಮ್‍ನಲ್ಲಿ ಭಾವೋದ್ವೇಗದಿಂದ ಕೂಡಿದ ಪತ್ರವನ್ನು ಹಂಚಿಕೊಂಡಿದ್ದಾರೆ.

‘ಅಮ್ಮಾ..ನೀನು ಹೆಮ್ಮೆ ಪಡುವಂತೆ ತಲೆಯೆತ್ತಿಕೊಳ್ಳುವಂತೆ ಮಾಡುತ್ತೇನೆ’ ಎಂಬುದು ಪತ್ರದ ಸಾರಾಂಶ. ಅಮ್ಮ ತನಗೆ ದೂರವಾದ ಪ್ರತಿಕ್ಷಣವೂ ನನ್ನೊಂದಿಗೆ ಇದ್ದಂತೆ ಅನ್ನಿಸುತ್ತದೆ. ಎಂದಿಗೂ ಆಕೆಯ ಪ್ರೀತಿ ನನ್ನ ಸುತ್ತಲೂ ಇದ್ದಂತೆ ಭಾವಿಸುತ್ತೇನೆ ಎಂದು ಜಾನ್ವಿ ಹೇಳಿದ್ದಾರೆ. ‘ಇದ್ದಕ್ಕಿದ್ದಂತೆ ಅಂಧಕಾರವಾದ ತನ್ನ ಜೀವನದಲ್ಲಿ ತಾಯಿಯನ್ನೇ ಸ್ಫೂರ್ತಿಯಾಗಿ ತೆಗೆದುಕೊಂಡು ಮುಂದೆ ಸಾಗುತ್ತೇನೆ’ ಎಂದಿದ್ದಾರೆ.

‘ಈಗಲೂ ಪ್ರೀತಿಯನ್ನು ಪಡೆಯುತ್ತಿದ್ದೇನೆ. ನೋವು, ಸಂಕಟದಿಂದ ನೀನೇ ನನ್ನನ್ನು ರಕ್ಷಿಸುತ್ತೀಯ ಎಂದುಕೊಳ್ಳುತ್ತಿದ್ದೇನೆ. ಪ್ರತಿ ಬಾರಿ ನಾನು ಕಣ್ಣುಮುಚ್ಚಿಕೊಂಡರೆ ನನಗೆ ಒಳ್ಳೆಯ ಸಂಗತಿಗಳೇ ಕಾಣಿಸುತ್ತವೆ. ಅವೆಲ್ಲವನ್ನು ನೀನು ಕೊಟ್ಟಿದ್ದೇ. ನೀನು ತುಂಬಾ ಒಳ್ಳೆಯವರು. ಸ್ವಚ್ಛವಾದ ಮನಸ್ಸು, ಪ್ರೀತಿ ಇರುವ ತಾಯಿ. ಹಾಗಾಗಿಯೇ ದೇವರು ನಿನ್ನನ್ನು ಕರೆದೊಯ್ದ. ನಾನು ತುಂಬಾ ಸಂತೋಷವಾಗಿ ಇರುತ್ತೀನಿ ಎಂದು ಫ್ರೆಂಡ್ಸ್ ಹೇಳುತ್ತಿರುತ್ತಾರೆ. ಅದಕ್ಕೆ ಕಾರಣ ನೀನೇ.

ನನಗೆ ಯಾವಾಗಲೂ ಯಾವುದೇ ಕಷ್ಟ, ನೋವು, ನಿಶ್ಯಕ್ತಿ ಅನ್ನಿಸಲೇ ಇಲ್ಲ. ಅದಕ್ಕೆ ಕಾರಣ ನೀನೇ ಅಮ್ಮಾ. ನನ್ನನ್ನು ತುಂಬಾ ಪ್ರೀತಿಸಿದೆ. ನೀನು ನನ್ನ ಆತ್ಮದ ಭಾಗ. ನಿನ್ನ ಸಂಪೂರ್ಣ ಜೀವನವನ್ನು ನಮಗಾಗಿ ಧಾರೆ ಎರೆದೆ. ಹಾಗಾಗಿಯೇ ಇನ್ನು ಮುಂದೆ ನೀನು ಹೆಮ್ಮೆಪಡುವಂತೆ ಇರುತ್ತೀವಿ. ಪ್ರತಿ ದಿನ ನಿನ್ನನ್ನು ಸ್ಮರಿಸಿಯೇ ಕೆಲಸ ಆರಂಭಿಸುತ್ತೇನೆ. ಎಂದಿನಂತೆಯೇ ನಿನ್ನನ್ನು ನಿದ್ದೆಯಿಂದ ಎಬ್ಬಿಸಲ್ಲ. ಯಾಕೆಂದರೆ ನೀನು ಇಲ್ಲೇ ನಮ್ಮೊಂದಿಗೆ ಇದ್ದೀಯ ಎಂದು ಭಾವಿಸಿದ್ದೇನೆ. ನೀನು ನನ್ನಲ್ಲಿ, ಖುಷಿಯಲ್ಲಿ, ಅಪ್ಪನಲ್ಲಿದ್ದೀಯ’ ಎಂದು ಭಾವನಾತ್ಮಕವಾಗಿ ಜಾನ್ವಿ ಪತ್ರದಲ್ಲಿ ತನ್ನ ಭಾವೋದ್ವೇಗಗಳನ್ನು ಹೊರಹಾಕಿದ್ದಾರೆ.

ಪ್ರತಿಯೊಬ್ಬರೂ ತನ್ನ ತಾಯಿಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬಯಸಬೇಕೆಂದು ಜಾನ್ವಿ ಮನವಿ ಮಾಡಿದ್ದಾರೆ. ‘ತನ್ನ ತಂದೆ, ತಾಯಿ ಅದೆಷ್ಟು ಪ್ರೀತಿಯಿಂದ ಇರುತ್ತಿದ್ದರು ಅಂತ ನನಗೆ ಚೆನ್ನಾಗಿ ಗೊತ್ತು. ನಾನು, ಖುಷಿ ತಾಯಿಯನ್ನು ಮಾತ್ರ ಕಳೆದುಕೊಂಡಿದ್ದೇವೆ. ಆದರೆ ನಮ್ಮ ತಂದೆ ಸರ್ವಸ್ವವನ್ನೂ ಕಳೆದುಕೊಂಡಿದ್ದಾರೆ. ನಮ್ಮ ತಂದೆಗೆ ಅವರು ನಟಿ, ತಾಯಿ, ಪತ್ನಿಗಿಂತಲೂ ಹೆಚ್ಚು. ಅದೆಷ್ಟು ಅಂತ ನಾನು ಹೇಳಲಾಗದು’ ಎಂದು ಜಾನ್ವಿ ಹೇಳಿದ್ದಾರೆ.

Comments are closed.