ಮನೋರಂಜನೆ

ತೆಲುಗು ನಟ ಪವನ್ ಕಲ್ಯಾಣ್ ಅಭಿಮಾನಿ ಕೊಲೆ ಪ್ರಕರಣ – ಆರೋಪಿಗೆ ಜೀವಾವಧಿ ಶಿಕ್ಷೆ

Pinterest LinkedIn Tumblr


ಕೋಲಾರ: ತೆಲುಗು ನಟ ಪವನ್ ಕಲ್ಯಾಣ್ ಅಭಿಮಾನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿರುವ ಕೋಲಾರ 2ನೇ ಜಿಲ್ಲಾ ಸತ್ರ ನ್ಯಾಯಾಲಯ ಪ್ರಕರಣದ ಎ 1 ಆರೋಪಿಗೆ ಜೀವಾವಧಿ ಶಿಕ್ಷೆ ನೀಡಿದೆ.

2016 ಆಗಸ್ಟ್ ತಿಂಗಳಿನಲ್ಲಿ ಪವನ್ ಅಭಿಮಾನಿ ವಿನೋದ್ ರಾಯಲ್ ಎಂಬ ಯುವಕನನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಮೊದಲನೇ ಆರೋಪಿ ಅಕ್ಷಯ್ ಕುಮಾರ್ ಗೆ ಜೀವಾವಧಿ ಶಿಕ್ಷೆ ಹಾಗೂ ಎರಡನೇ ಆರೋಪಿ ಸುನೀಲ್‍ಗೆ ಒಂದು ವರ್ಷ ಜೈಲು ಶಿಕ್ಷೆ ನೀಡಿ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಏನಿದು ಪ್ರಕರಣ: ಮೃತ ವಿನೋದ್ ಕೋಲಾರದ ಪವನ್ ಕಲ್ಯಾಣ್ ಅಭಿಮಾನಿಗಳ ಸಂಘದಲ್ಲಿ ಸಕ್ರೀಯರಾಗಿ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಇದರಂತೆ 2016 ಆ.21 ರ ಭಾನುವಾರ ವಿನೋದ್ ಕಾರ್ಯಕ್ರಮವೊಂದರಲ್ಲಿ ಕಣ್ಣು ದಾನ ಮಾಡುವುದಾಗಿ ಪ್ರಕಟಿಸಿದರು. ಇದೇ ಕಾರ್ಯಕ್ರಮಕ್ಕೆ ಜ್ಯೂನಿಯರ್ ಎನ್‍ಟಿಆರ್ ಅಭಿಮಾನಿಗಳು ಕೂಡ ಆಗಮಿಸಿದ್ದರು. ಆದರೆ ಕಾರ್ಯಕ್ರಮದಲ್ಲಿ ವಿನೋದ್ ತಮ್ಮ ನಟನ ಬಗ್ಗೆ ಅಭಿಮಾನದಿಂದ ಮಾತನಾಡಿದ್ದ ವಿಚಾರವಾಗಿ ಎನ್‍ಟಿಆರ್ ಅಭಿಮಾನಿಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ವಿಕೋಪಕ್ಕೆ ತಿರುಗಿ ವಿನೋದ್‍ಗೆ ಇರಿದು ಕೊಲೆ ಮಾಡಲಾಗಿತ್ತು. ಈ ಘಟನೆಯ ಬಳಿಕ ನಟ ಪವನ್ ಕಲ್ಯಾಣ್ ಅಭಿಮಾನಿಯ ಮನೆಗೆ ಭೇಟಿ ನೀಡಿ ಸ್ವಾಂತನ ಹೇಳಿದ್ದರು.

ಕೋಲಾರ ತಾಲ್ಲೂಕು ನರಸಾಪುರ ಬಳಿ ಕೊಲೆ ನಡೆದಿತ್ತು, ಈ ಸಂಬಂಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Comments are closed.