ಮನೋರಂಜನೆ

ಅನುಷ್ಕಾ ಶರ್ಮಾ ಆರತಕ್ಷತೆಗೆ ಆಗಮಿಸಿದ್ದು ತುಂಬಾ ವಿಶೇಷತೆನೇ: ಮಾಜಿ ಪ್ರೇಯಸಿ ಕುರಿತು ನಟ ರಣ್‍ವೀರ್ ಸಿಂಗ್

Pinterest LinkedIn Tumblr


ಮುಂಬೈ: ಅನುಷ್ಕಾ ಶರ್ಮಾ ನನ್ನ ಆರತಕ್ಷತೆಗೆ ಆಗಮಿಸಿದ್ದು ನೋಡಿ ನನಗೆ ತುಂಬಾನೇ ಸ್ಪೆಷಲ್ ಅನಿಸಿತ್ತು ಎಂದು ಬಾಲಿವುಡ್ ನಟ ರಣ್‍ವೀರ್ ಸಿಂಗ್ ತನ್ನ ಮಾಜಿ ಪ್ರೇಯಸಿಯನ್ನು ನೆನೆದಿದ್ದಾರೆ.

ಇತ್ತೀಚೆಗೆ ರಣ್‍ವೀರ್ ಫಿಲಂಫೇರ್ ಮ್ಯಾಗಜೀನ್‍ಗೆ ಸಂದರ್ಶನ ನೀಡಿದ್ದರು. ಈ ವೇಳೆ ಸಂರ್ದಶಕ ನಿಮ್ಮ ಆರತಕ್ಷತೆಗೆ ಅನುಷ್ಕಾ ಶರ್ಮಾ, ಕತ್ರಿನಾ ಕೈಫ್ ಎಲ್ಲರೂ ಆಗಮಿಸಿ ನಿಮಗೆ ಶುಭಾಶಯ ಕೋರಲು ಬಂದಿದ್ದರು. ಅವರು ನಿಮ್ಮ ಆರತಕ್ಷತೆಗೆ ಬಂದಿದ್ದು ನಿಮಗೆ ಹೇಗೆ ಅನಿಸಿತು ಎಂದು ಪ್ರಶ್ನಿಸಿದ್ದರು. ಆಗ ರಣ್‍ವೀರ್ ಸಿಂಗ್ ಆರತಕ್ಷತೆಗೆ ಎಲ್ಲರು ಆಗಮಿಸಿದ್ದು ಖುಷಿ ಆಯಿತು. ಅದರಲ್ಲೂ ಅನುಷ್ಕಾ ಶರ್ಮಾ ನನ್ನ ಆರತಕ್ಷತೆಗೆ ಬಂದಿದ್ದು ನನಗೆ ತುಂಬಾನೇ ಸ್ಪೆಷಲ್ ಅನಿಸಿತ್ತು ಎಂದು ರಣ್‍ವೀರ್ ಹೇಳಿದ್ದಾರೆ.

2010ರಲ್ಲಿ ಬಿಡುಗಡೆಯಾದ ‘ಬ್ಯಾಂಡ್ ಬಾಜಾ ಭಾರತ್’ ಸಿನಿಮಾದಲ್ಲಿ ರಣ್‍ವೀರ್ ಸಿಂಗ್ ಹಾಗೂ ಅನುಷ್ಕಾ ಶರ್ಮಾ ನಟಿಸಿದ್ದರು. ಈ ಚಿತ್ರದಿಂದ ಇಬ್ಬರು ಪ್ರೀತಿಸಲು ಶುರು ಮಾಡಿದ ಬಳಿಕ ಯಾವುದೋ ಕಾರಣದಿಂದ ಇಬ್ಬರ ನಡುವಿನ ಪ್ರೀತಿ ಬ್ರೇಕಪ್ ಆಯ್ತು.

ಅನುಷ್ಕಾ 2017ರಲ್ಲಿ ಟೀಂ ಇಂಡಿಯಾ ತಂಡದ ನಾಯಕ ವಿರಾಟ್ ಕೊಹ್ಲಿ ಜೊತೆ ಇಟಲಿಯ ಟಸ್ಕನಿ ನಗರದ `ಬೋಗೋ ಫಿನೊಕಿಯೆಟೊ’ದ ದ್ರಾಕ್ಷಿ ತೋಟದ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರೆ, ರಣ್‍ವೀರ್ 2018ರಲ್ಲಿ ಇಟಲಿಯ ಲೇಕ್ ಕೋಮೋದಲ್ಲಿ ನಟಿ ದೀಪಿಕಾ ಪಡುಕೋಣೆ ಅವರ ಕೈ ಹಿಡಿದಿದ್ದರು.

ರಣ್‍ವೀರ್ ಹಾಗೂ ದೀಪಿಕಾ ಮದುವೆ ಆದ ಬಳಿಕ ಅನುಷ್ಕಾ ಶರ್ಮಾ ತಮ್ಮ ಟ್ವಿಟ್ಟರಿನಲ್ಲಿ, “ನಿಮ್ಮಿಬ್ಬರಿಗೂ ಪ್ರಪಂಚದ ಎಲ್ಲ ಖುಷಿ ಸಿಗಲಿ. ನೀವಿಬ್ಬರು ಯಾವಾಗಲೂ ಜೊತೆಯಾಗಿರಿ. ನೀವಿಬ್ಬರು ಈಗಿರುವ ಹಾಗೇ ಮುಂದೆ ಜೀವನದಲ್ಲೂ ಒಬ್ಬರನೊಬ್ಬರು ಪ್ರೀತಿಸುತ್ತೀರಿ. ನಿಮ್ಮಿಬ್ಬರಿಗೂ ನಮ್ಮ ಕ್ಲಬ್‍ಗೆ ಸ್ವಾಗತ” ಎಂದು ಟ್ವೀಟ್ ಮಾಡಿ ಶುಭಾಶಯ ತಿಳಿಸಿದ್ದರು. ಅಷ್ಟೇ ಅಲ್ಲದೇ ಮುಂಬೈನಲ್ಲಿ ನಡೆದ ದೀಪ್‍ವೀರ್ ಆರತಕ್ಷತೆಗೆ ಆಗಮಿಸಿ ನೇರವಾಗಿ ಶುಭಾಶಯ ಕೋರಿದ್ದರು.

Comments are closed.