ಮನೋರಂಜನೆ

ಹುತಾತ್ಮ ಯೋಧರ ಕುಟುಂಬಕ್ಕೆ ಅಕ್ಷಯ್ ಕುಮಾರ್ 5 ಕೋಟಿ ದಾನ

Pinterest LinkedIn Tumblr


ಮುಂಬೈ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ 40 ವೀರ ಯೋಧರ ಕುಟುಂಬಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು 5 ಕೋಟಿ ರೂ. ದಾನ ಮಾಡಿದ್ದಾರೆ.

ಅಕ್ಷಯ್ ಕುಮಾರ್ ದಾಳಿಯಲ್ಲಿ ಹುತಾತ್ಮರಾದ ಕುಟುಂಬಕ್ಕೆ 5 ಕೋಟಿ ರೂ.. ದಾನ ಮಾಡಿದ್ದಾರೆ. ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ ಅವರು ಕೂಡ ಕಳೆದ ವಾರ ಹುತಾತ್ಮ ಕುಟುಂಬಕ್ಕೆ ತಲಾ 5 ಲಕ್ಷ ರೂ. ಸಹಾಯಧನ ಮಾಡಿದ್ದರು.

ಈ ಬಗ್ಗೆ ಅಕ್ಷಯ್ ಕುಮಾರ್ ಅವರು ಟ್ವೀಟ್ ಮಾಡಿ, “ಪುಲ್ವಾಮದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ನಡೆದ ದಾಳಿ ನಂಬಲು ಸಾಧ್ಯವಾಗುತ್ತಿಲ್ಲ. ದೇವರು ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಧೈರ್ಯ ತುಂಬಲಿ. ಅಲ್ಲದೇ ಈ ದಾಳಿಯಲ್ಲಿ ಗಾಯಗೊಂಡ ಯೋಧರು ಶೀಘ್ರವೇ ಗುಣಮುಖರಾಗಲಿ ಎಂದು ನಾನು ಬೇಡಿಕೊಳ್ಳುತ್ತೇನೆ. ನಾವು ಇದನ್ನು ಎಂದಿಗೂ ಮರೆಯುವುದಕ್ಕೆ ಸಾಧ್ಯವಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‍ನಲ್ಲಿ ಅಕ್ಷಯ್ ಕುಮಾರ್, “ಪುಲ್ವಾಮ ದಾಳಿ ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅದು ಮರೆಯಲು ಆಗುವುದಿಲ್ಲ ಕೂಡ. ನಾವೆಲ್ಲ ಈಗ ಕೋಪದಲ್ಲಿದ್ದೇವೆ. ಈ ಸಮಯದಲ್ಲಿ ನಾವು ಏನಾದರೂ ಮಾಡಬೇಕು. ಹಾಗಾಗಿ ಎಲ್ಲರೂ ಹುತಾತ್ಮ ಯೋಧರ ಕುಟುಂಬಕ್ಕೆ ದಾನ ಮಾಡಿ. ಅವರಿಗೆ ಗೌರವ ನೀಡಲು ಬೇರೆ ಯಾವ ಮಾರ್ಗ ಇಲ್ಲ. ನೀವು ಕೂಡ ಇದಕ್ಕೆ ಬೆಂಬಲ ನೀಡಿ” ಎಂದು ಟ್ವೀಟ್ ಮಾಡಿದ್ದಾರೆ.

ಸದ್ಯ ಅಕ್ಷಯ್ ಕುಮಾರ್ ಅವರು ನಟಿ ಕರೀನಾ ಕಪೂರ್ ಜೊತೆ ‘ಗುಡ್ ನ್ಯೂಸ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನು ಹೊರತು ಪಡಿಸಿ ಅಕ್ಷಯ್ ಕುಮಾರ್ ಅವರು ‘ಕೇಸರಿ’ ಹಾಗೂ ‘ಹೌಸ್ ಫುಲ್-4’ ಚಿತ್ರದ ಶೂಟಿಂಗ್ ಮುಕ್ತಾಯವಾಗಿದ್ದು ಬಿಡುಗಡೆಯಾಗ ಬೇಕಿದೆ.

Comments are closed.