ಮನೋರಂಜನೆ

ಉದ್ಘರ್ಷ ಚಿತ್ರಕ್ಕೆ ಸಾಥ್ ನೀಡಿದ ಸುದೀಪ್-ದರ್ಶನ್!

Pinterest LinkedIn Tumblr

ಬೆಂಗಳೂರು: ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ಬಹು ನಿರೀಕ್ಷಿತ ಉದ್ಘರ್ಷ ಇನ್ನೇನು ಬಿಡುಗಡೆಯಾಗಲಿದೆ. ಈಗಾಗಲೇ ವಿಭಿನ್ನವಾದ ಪೋಸ್ಟರ್ ಸೇರಿದಂತೆ ಎಲ್ಲ ಬಗೆಯಲ್ಲಿಯೂ ಪ್ರೇಕ್ಷಕರನ್ನು ಆಕರ್ಷಿಸಿರುವ ಈ ಚಿತ್ರದ ಟ್ರೈಲರ್ ಇದೇ ತಿಂಗಳ 5ರಂದು ಬಿಡುಗಡೆಯಾಗಲಿದೆ.

ವಿಶೇಷವೆಂದರೆ ಈ ಟ್ರೈಲರ್ ಗೆ ಕಿಚ್ಚ ಸುದೀಪ್ ಅವರು ಖಡಕ್ ವಾಯ್ಸ್ ನೀಡಿದ್ದಾರೆ. ಇದನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಿಡುಗಡೆಗೊಳಿಸಲಿದ್ದಾರೆ. ಈ ಮೂಲಕ ಈ ಕುಚಿಕು ಗೆಳೆಯರ ಸಮಾಗಮವಾಗಿದೆ. ಸುದೀಪ್ ಅವರಂತೂ ತಮ್ಮ ಗುರುಗಳಾದ ಸುನೀಲ್ ಕುಮಾರ್ ದೇಸಾಯಿ ಅವರ ಉದ್ಘರ್ಷಕ್ಕೆ ಆರಂಭದಿಂದಲೂ ಬೆಂಬಲ ನೀಡುತ್ತಾ ಬಂದಿದ್ದಾರೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡಾ ಸಾಥ್ ನೀಡಲು ಮುಂದಾಗಿದ್ದಾರೆ.

ಠಾಕೂರ್ ಅವರ ಖಡಕ್ ಲುಕ್ಕಿಗೆ ತಕ್ಕುದಾದ ಪಾತ್ರವನ್ನೇ ದೇಸಾಯಿ ಸೃಷ್ಟಿಸಿದ್ದಾರೆ. ಆರಂಭದಿಂದಲೂ ದೇಸಾಯಿ ಅವರ ಚಿತ್ರಗಳನ್ನು ನೋಡಿಕೊಂಡೇ ಬಂದಿದ್ದ ಆರ್. ದೇವರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಂಜುನಾಥ್.ಡಿ ಮತ್ತು ರಾಜೇಂದ್ರ ಕುಮಾರ್ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ.

Comments are closed.