ಮನೋರಂಜನೆ

ಶ್ರೀಲಂಕಾ ಬಾಂಬ್ ಸ್ಫೋಟ: ಅಗಲಿದ ಗೆಳೆಯನನ್ನು ನೆನೆದು, ಭಾವುಕ ಪೋಸ್ಟ್ ಮಾಡಿದ ನಟ ಗಣೇಶ್

Pinterest LinkedIn Tumblr


ಬೆಂಗಳೂರು: ಶ್ರೀಲಂಕಾ ಪ್ರವಾಸಕ್ಕೆ ತೆರಳಿದಲ್ಲಿದ್ದ ಕನ್ನಡಿಗರಲ್ಲಿ 7 ಮಂದಿ ಸಾವನ್ನಪ್ಪಿದ್ದು, ತಮ್ಮ ಆತ್ಮೀಯ ಗೆಳೆಯರನ್ನು ನೆನೆದು ನಟ ಗಣೇಶ್ ಮಾಡಿದ್ದಾರೆ.

ತಮ್ಮ ಟ್ವಿಟ್ಟರ್ ನಲ್ಲಿ ಗೆಳೆಯರೊಂದಿಗಿನ ಫೋಟೋ ಹಂಚಿಕೊಂಡಿರುವ ನಟ ಗಣೇಶ್, ನೀವು ಇಲ್ಲ ಎಂಬುವುದನ್ನು ನಂಬಲು ಆಗುತ್ತಿಲ್ಲ. ಈ ಸಂದರ್ಭದಲ್ಲಿ ನೋವನ್ನು ಹಂಚಿಕೊಳ್ಳಲು ಪದಗಳೇ ಸಿಗುತ್ತಿಲ್ಲ. ಪುಟ್ಟರಾಜು, ಎನ್ ಮಾರೇಗೌಡ (ಅಪ್ಪಿ) ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಶ್ರೀಲಂಕಾದಲ್ಲಿ ನಡೆದ ಉಗ್ರರ ದಾಳಿಯನ್ನು ನಾನು ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಇತ್ತ ಸ್ಫೋಟದಲ್ಲಿ ಸಾವನ್ನಪ್ಪಿದ್ದ 7 ಕನ್ನಡಿಗರ ಮೃತದೇಹ ಇಂದು ಮಧ್ಯರಾತ್ರಿ ಬೆಂಗಳೂರಿಗೆ ರವಾನೆಯಾಗುವ ಸಂಭವವಿದ್ದು, ವಿಶೇಷ ವಿಮಾನದಲ್ಲಿ ಕೊಲಂಬೋದಿಂದ ಮೃತದೇಹಗಳನ್ನು ತರಲಾಗುತ್ತಿದೆ. ಈ ಬಗ್ಗೆ ಕೊಲಂಬೋದಲ್ಲಿನ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿ ಮಂಜುನಾಥ್ ಮಾಹಿತಿ ನೀಡಿದ್ದಾರೆ.

Comments are closed.