ಮನೋರಂಜನೆ

ನಾವು ಸಾಧನೆಗಳ ಕುರಿತು ಮಾತನಾಡುವುದಲ್ಲ, ಸಾಧನೆಗಳನ್ನು ಮಾಡಿ ತೋರಿಸಬೇಕು: ಸುಮಲತಾ ಅಂಬರೀಷ್

Pinterest LinkedIn Tumblr


ಮಂಡ್ಯ: ಇದೊಂದು ದುರಂತದ ಸಂಗತಿ. ಆ ಕುಟುಂಬಗಳಿಗೆ ಅನುದಾನ ತಲುಪಿರೋದು ಮುಖ್ಯ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ ಅವರು ತಮ್ಮ ಬೆಂಬಲಿಗರು ಹಾಗೂ ಜೆಡಿಎಸ್​ ಕಾರ್ಯಕರ್ತರ ನಡುವಿನ ವಾಗ್ವಾದದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಮಂಡ್ಯದ ಮಾಚಹಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಅನುದಾನ ಯಾರು ಕೊಟ್ಟಿದ್ದಾರೆ/ಕೊಡಿಸಿದ್ದಾರೆ ಅನ್ನೋದು ಮುಖ್ಯವಲ್ಲ. ನಾನು ಕೊಟ್ಟಿದ್ದೀನಿ. ನೀವು ಕೊಟ್ಟಿಲ್ಲ ಅನ್ನೋದು ತುಂಬಾ ತಪ್ಪಾಗುತ್ತೆ ಎಂದು ಅವರು ನುಡಿದರು.

ಇನ್ನು ಆ ರೀತಿ ತಪ್ಪು ಯಾರೂ ಮಾಡಬಾರದು ನಾನಂತೂ ಆ ತಪ್ಪು ಮಾಡೋದಿಲ್ಲ. ಅದನ್ನ ಪ್ರಚಾರಕ್ಕೆ ಬಳಸೋದು ನನಗಿಷ್ಟ ಇಲ್ಲ. ಹಿಂದೆಯಿಂದಲೂ ನಾನು ಸಾಕಷ್ಟು ಸಲ ಹೇಳಿದ್ದೀನಿ. ಸಾಧನೆಗಳು ನಮ್ಮ ಬಗ್ಗೆ ಮಾತಾಡಬೇಕು. ನಾವು ನಮ್ಮ ಸಾಧನೆಗಳ ಬಗ್ಗೆ ಮಾತಾಡಬಾರದು ಎಂದರು.

ಯಾರೇ ಮಾಡಿರಲಿ. ಅದನ್ನ ಹೇಳಿಕೊಳ್ಳಬಾರದು. ಯಾರು ಬೇಕಾದರೂ ಇದರ ಕ್ರೆಡಿಟ್ ತೆಗೆದುಕೊಳ್ಳಲಿ. ನನಗೆ ಆ ಬಗ್ಗೆ ಬೇಜಾರ್ ಏನೂ ಇಲ್ಲ. ನನ್ನ ಕೆಲಸ ಈಗಷ್ಟೇ ಆರಂಭವಾಗಿದೆ ಅದನ್ನ ಅಚ್ಚುಕಟ್ಟಾಗಿ ಮಾಡಿಕೊಂಡು ಹೋಗುವ ನಂಬಿಕೆ ನನಗಿದೆ. ಅಧಿವೇಶನದ ಬಳಿಕ ಕ್ಷೇತ್ರ ಪ್ರವಾಸ ಮಾಡ್ತೀನಿ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ ತಿಳಿಸಿದ್ದಾರೆ.

ಅಷ್ಟೇ ಅಲ್ಲದೇ ಬಜೆಟ್​ನಲ್ಲಿ ಸಾಕಷ್ಟು ಕೊಡುಗೆ ನೀಡೋ ವಿಶ್ವಾಸ, ನಿರೀಕ್ಷೆ ಇದೆ. ಸಂಬಂಧಪಟ್ಟ ವಿಶೇಷ ಯೋಜನೆ ನೀಡುವಂತೆ ಸಚಿವರ ಜೊತೆ ಚರ್ಚೆ ಮಾಡ್ತೀನಿ. ಮಂಡ್ಯದ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡಲಾಗುವುದು. ಅದರಲ್ಲೂ ಮಂಡ್ಯ ರೈತರ ಸಮಸ್ಯೆ ಪರಿಹಾರಕ್ಕೆ ಮೊದಲ ಪ್ರಯತ್ನ ನಡೆಸಲಾಗುವುದು ಎಂದರು.

Comments are closed.