ಮನೋರಂಜನೆ

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕರ 3ನೇ ಚಿತ್ರದ ಚಿತ್ರೀಕರಣ ಮುಕ್ತಾಯ

Pinterest LinkedIn Tumblr


ಸಿನೆಮಾ ಚಿತ್ರೀಕರಣ ಮುಗಿಸಿದ ಬೆನ್ನಲ್ಲೇ ನಾಳೆ ಅಂದರೆ ನವೆಂಬರ್ 4ರಂದು ಬೆಳಗ್ಗೆ 9 ಗಂಟೆಗೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಿದೆ ಚಿತ್ರತಂಡ. ಅಷ್ಟೇ ಅಲ್ಲದೆ ಈ ಚಿತ್ರದ ಟೈಟಲ್ ಕೂಡ ನಾಳೆ ರಿವೀಲ್ ಆಗಲಿದೆ.

“ನನ್ನ ತನವನ್ನು ಉಳಿಸಿಕೊಂಡು ನನಗಿದ್ದ ಇತಿಮಿತಿಗಳನ್ನು ಮೀರಿ ದೊಡ್ಡ ಕ್ಯಾನ್ವಾಸಿನ ಚಿತ್ರವೊಂದನ್ನು ನಿರ್ದೇಶನ ಮಾಡಿದ ಖುಷಿಯ ಜೊತೆಗೆ ಜವಾಬ್ದಾರಿಯೂ ಹೆಚ್ಚಿದೆ. ಈ ಚಿತ್ರ ಮಹಿಳಾ ಪ್ರಧಾನ ಚಿತ್ರವಿದು. ಸೋಷಿಯಲ್‌ ಥ್ರಿಲ್ಲರ್‌ ಅಂಶಗಳು ಇಲ್ಲಿವೆ. ಸಮಾಜ, ಅಲ್ಲಿನ ವ್ಯವಸ್ಥೆ ಮತ್ತು ಮಧ್ಯಮ ವರ್ಗದವರ ಬದುಕಿನ ತಳಮಳವನ್ನು ಹೇಳುವ ಪ್ರಯತ್ನ ಇಲ್ಲಿದೆ. ನಮ್ಮ ಸುತ್ತಲು ಹಲವು ಸಂಗತಿಗಳು ನಡೆಯುತ್ತಿರುತ್ತವೆ. ಅವುಗಳನ್ನು ಎದುರಿಸಲು ನಾನು ಹರ ಸಾಹಸ ಪಡಬೇಕಾಗುತ್ತದೆ. ಅಂತಹ ಒಂದು ಘಟನೆಯೇ ಸಿನಿಮಾಗೆ ಪ್ರೇರಣೆ. ಈ ಹಿಂದಿನ ನನ್ನ ಸಿನಿಮಾಗಳಲ್ಲಿ ಕೆಲವೇ ಕೆಲವು ಪಾತ್ರಗಳಿದ್ದವು, ಆದರೆ ಈ ಬಾರಿ 30ಕ್ಕೂ ಅಧಿಕ ಸಿನಿಮಾ ಮತ್ತು ರಂಗಭೂಮಿ ಕಲಾವಿದರು ನಟಿಸಿದ್ದಾರೆ ‘ಎಂದು ವಿಜಯ ಕರ್ನಾಟಕ ವೆಬ್‌ಸೈಟ್ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ ನಿರ್ದೇಶಕ ಮಂಸೋರೆ.

ಈಗಾಗಲೇ ಇವರು ಎರಡು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದಾರೆ. ಫೆಬ್ರವರಿಯಲ್ಲಿ ಈ ಚಿತ್ರ ರಿಲೀಸ್ ಮಾಡುವ ಪ್ಲ್ಯಾನ್‌ನಲ್ಲಿದ್ದಾರೆ ನಿರ್ದೇಶಕರು.

ಯಜ್ಞಾ ಶೆಟ್ಟಿ, ಬಿ.ಸುರೇಶ್, ಪ್ರಮೋದ್ ಶೆಟ್ಟಿ, ಹಿರಿಯ ಕಲಾವಿದೆ ಶೃತಿ, ದತ್ತಣ್ಣ, ಅಚ್ಯುತ ಕುಮಾರ್, ಅವಿನಾಶ್, ಶೋಭರಾಜ್, ಶರಣ್ಯಾ ಶರಣು, ಸುಧಾ ಬೆಳವಾಡಿ, ಕವಲುದಾರಿ ಖ್ಯಾತಿಯ ಸಂಪತ್ ಮೈತ್ರೇಯ ಮತ್ತಿತರ ಬಹುದೊಡ್ಡ ತಾರಾಗಣದ ಚಿತ್ರ ಇದಾಗಿದೆ.

ಈ ಚಿತ್ರದಲ್ಲಿ ಪ್ರತಿಭಾವಂತರ ತಂಡವೇ ಇದೆ. ಉದ್ಘರ್ಷ ಸಿನಿಮಾ ನಿರ್ಮಾಣ ಮಾಡಿದ್ದ ದೇವರಾಜ್‌ ಆರ್‌ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಮಂಸೋರೆ, ಟಿ.ಕೆ.ದಯಾನಂದ್‌, ವೀರೇಂದ್ರ ಮಲ್ಲಣ್ಣ ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ನಾಗೇಂದ್ರ ಕೆ. ಉಜ್ಜನಿ ಈ ಚಿತ್ರದ ಸಂಕಲನಕಾರರು.

Comments are closed.