ಬೆಂಗಳೂರು: ಚಿರಂಜೀವಿ ಸರ್ಜಾ ಅಗಲಿಕೆಯಿಂದ ಸ್ವಲ್ಪ ಚೇತರಿಸಿಕೊಂಡಿರುವ ಮೇಘನಾ ರಾಜ್, ಅಕ್ಟೋಬರ್ 17ರ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದಾರೆ.
ಈ ಬಗ್ಗೆ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಚಿರಂಜೀವಿ ಸರ್ಜಾ ನಟನೆಯ ರಾಜಮಾರ್ತಾಂಡ ಚಿತ್ರದ ಫೋಟೋವೊಂದನ್ನು ಹಂಚಿಕೊಂಡಿರುವ ಮೇಘನಾ ರಾಜ್, ಇದೇ ಚಿತ್ರಕ್ಕಾಗಿ ಅವರು ಕಾಯುತ್ತಿದ್ದರು. ಈ ಚಿತ್ರಕ್ಕಾಗಿ ಅವರು ಬಹಳಷ್ಟು ಕಾಯುತ್ತಿದ್ದರು, ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು ಎಂದು ಬರೆದುಕೊಂಡಿದ್ದಾರೆ. ಇನ್ನು ಅಕ್ಟೋಬರ್ 17ರಂದು ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬವಿರುವುದರಿಂದ ಅಂದೇ ರಾಜಮಾರ್ತಾಂಡ ಚಿತ್ರದ ವಿಡಿಯೋ ಸಾಂಗ್ ರಿಲೀಸ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ
ಇನ್ನು ಇತ್ತೀಚೆಗಷ್ಟೇ ಮೇಘನಾ ರಾಜ್ ಅವರ ಸೀಮಂತ ಕಾರ್ಯಕ್ರಮ ಆಚರಿಸಿದ ಕುಟುಂಬ ಮನೆಗೊಂದು ಪುಟ್ಟ ಚಿರಂಜೀವಿ ಸರ್ಜಾ ಆಗಮಿಸುವ ನಿರೀಕ್ಷೆಯಲ್ಲಿದ್ದಾರೆ. ಇನ್ನು ಅದೇ ದಿನ ಧೃವ ಸರ್ಜಾ ತನ್ನ ಹುಟ್ಟುಹಬ್ಬವನ್ನೂ ಆಚರಿಸಿಕೊಂಡಿದ್ದರು.
Comments are closed.