ಮನೋರಂಜನೆ

ವಿಮಾನದಲ್ಲಿ ದುಬೈ ಪ್ರಯಾಣಿಸುವಾಗ ಬೇರೆ ಪ್ರಯಾಣಿಕರಿಲ್ಲದನ್ನು ಕಂಡು ಬೇಸರ ವ್ಯಕ್ತಪಡಿಸಿದ ನಟ ಆರ್.ಮಾಧವನ್

Pinterest LinkedIn Tumblr

ಬೆಂಗಳೂರು: ದೇಶದಲ್ಲಿ ಕೋವಿಡ್ ನಿರ್ಬಂಧ ಮತ್ತು ಅಂತರರಾಷ್ಟ್ರೀಯ ಪ್ರಯಾಣಕ್ಕೆ ವಿವಿಧ ನಿಯಮಗಳು ಜಾರಿಯಲ್ಲಿವೆ. ಇದೇ ಸಂದರ್ಭದಲ್ಲಿ ನಟ ಆರ್.ಮಾಧವನ್ ದುಬೈಗೆ ಹೋಗಿಬಂದಿದ್ದು, ವಿಮಾನದಲ್ಲಿ ಒಬ್ಬನೇ ಪ್ರಯಾಣಿಸಿದೆ ಎಂದು ತಿಳಿಸಿದ್ದಾರೆ.

ದುಬೈಗೆ ಪ್ರಯಾಣಿಸಬೇಕಾದರೆ ಕೋವಿಡ್ ನೆಗೆಟಿವ್ ವರದಿ ಮತ್ತು ಲಸಿಕೆ ಪ್ರಮಾಣಪತ್ರ ಕಡ್ಡಾಯವಾಗಿದೆ. ಇವು ಇಲ್ಲದಿದ್ದರೆ, ಪ್ರಯಾಣಕ್ಕೆ ಅನುಮತಿ ಇರುವುದಿಲ್ಲ.

ಮಾಧವನ್ ಪ್ರಯಾಣಿಸಿದ ಸಂದರ್ಭದಲ್ಲಿ ಅವರೊಬ್ಬರೇ ಇದ್ದಿದ್ದು, ಖಾಲಿ ವಿಮಾನ ಮತ್ತು ಏರ್‌ಪೋರ್ಟ್ ಕಂಡು ಅಚ್ಚರಿ ಜತೆಗೆ ಬೇಸರವಾಯಿತು ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಮಾಧವನ್ ಅವರು ವಿಡಿಯೊ ಪೋಸ್ಟ್ ಮಾಡಿದ್ದಾರೆ.

ವಿಮಾನ ನಿಲ್ದಾಣಗಳು ಖಾಲಿ ಹೊಡೆಯುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಈ ಪರಿಸ್ಥಿತಿ ಬೇಗನೇ ಸುಧಾರಿಸಲಿ, ಎಲ್ಲ ಮೊದಲಿನಂತಾಗಲಿ ಎಂದು ಮಾಧವನ್ ಹೇಳಿದ್ದಾರೆ.

Comments are closed.