ಕ್ರೀಡೆ

ಏಕದಿನ ಕ್ರಿಕೆಟ್ ಸರಣಿಗೆ ತಂಡ ಪ್ರಕಟ: ಕೋಹ್ಲಿಗೆ ವಿಶ್ರಾಂತಿ, ರೋಹಿತ್‌ ನಾಯಕ

Pinterest LinkedIn Tumblr


ಹೊಸದಿಲ್ಲಿ: ಶ್ರೀಲಂಕಾ ವಿರುದ್ಧ ನಡೆಯಲಿರುವ ಏಕದಿನ ಕ್ರಿಕೆಟ್‌ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನಿರೀಕ್ಷೆಯಂತೆ ವಿರಾಟ್‌ ಕೋಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

ವಿರಾಟ್‌ ಕೋಹ್ಲಿ ಬದಲಿಗೆ ಮತ್ತೊಬ್ಬ ಅನುಭವಿ ಆಟಗಾರ ರೋಹಿತ್‌ ಶರ್ಮಾ ತಂಡವನನ್ನು ಮುನ್ನಡೆಸಲಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ನಿರಂತರ ಕ್ರಿಕೆಟ್‌ ಆಡುತ್ತಿದ್ದ ವಿರಾಟ್‌ ಕೋಹ್ಲಿಗೆ ವಿಶ್ರಾಂತಿ ಅಗತ್ಯವಿತ್ತು. ಮುಂಬರುವ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಪ್ರವಾಸದ ಹಿನ್ನೆಲೆಯಲ್ಲಿ ವಿರಾಟ್‌ ಕೋಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

ಲಂಕಾ ವಿರುದ್ಧ ಮೂರನೇ ಹಾಗೂ ಕೊನೆಯ ಟೆಸ್ಟ್‌ ಡಿಸೆಂಬರ್‌ 2ರಿಂದ ಆರಂಭವಾಗಲಿದೆ.

ಡಿಸೆಂಬರ್‌ 10 ರಿಂದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿ ಆರಂಭವಾಗಲಿದ್ದು, ನಂತರ 3 ಟಿ-20 ಪಂದ್ಯ ನಡೆಯಲಿದೆ.

ತಂಡ ಇಂತಿದೆ: ರೋಹಿತ್‌ ಶರ್ಮಾ (ನಾಯಕ), ಶಿಖರ್‌ ಧವನ್‌, ಅಜಿಂಕ್ಯಾ ರಹಾನೆ, ಶ್ರೇಯಸ್‌ ಅಯ್ಯರ್‌, ಮನೀಷ್‌ ಪಾಂಡೆ, ಕೇದಾರ್ ಜಾಧವ್‌, ದಿನೇಶ್‌ ಕಾರ್ತಿಕ್‌, ಮಹೇಂದ್ರ ಸಿಂಗ್‌ ಧೋನಿ (ವಿಕೆಟ್‌ ಕೀಪರ್‌), ಹಾರ್ದಿಕ್‌ ಪಾಂಡ್ಯಾ, ಅಕ್ಸರ್‌ ಪಟೇಲ್‌, ಕುಲದೀಪ್‌ ಯಾದವ್‌, ಯಜುರ್ವೇಂದ್ರ ಚಹಾಲ್‌, ಜಸ್ಪ್ರೀತ್‌ ಬುಮ್ರಾ, ಭುವನೇಶ್ವರ್‌ ಕುಮಾರ್‌, ಸಿದ್ಧಾರ್ಥ್‌ ಕೌಲ್‌.

Comments are closed.