ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಂಗ್ಲರ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿದ್ದು ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿಗೆ ಬಿಸಿ ಮುಟ್ಟಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮುಂದಾಗಿದೆ.
ಪಂದ್ಯಗಳ ಸೋಲಿನ ಹೊಣೆಯನ್ನು ಕೋಚ್ ರವಿಶಾಸ್ತ್ರಿ ಹಾಗೂ ಕೊಹ್ಲಿ ಹೊರಬೇಕಿದ್ದು ಬಿಸಿಸಿಐ ಬಿಗ್ ಬಾಸ್ ಗಳು ಕೇಳುವ ಕಠಿಣ ಪ್ರಶ್ನೆಗಳಿಗೆ ಇಬ್ಬರು ಸಿದ್ಧರಾಗಬೇಕಿದೆ. ಆಗಸ್ಟ್ 18ರಿಂದ ನಾಟಿಂಗ್ ಹ್ಯಾಮ್ ನಲ್ಲಿ ನಡೆಯಲಿರುವ 3ನೇ ಟೆಸ್ಟ್ ಪಂದ್ಯದ ಫಲಿತಾಂಶವನ್ನು ನೋಡಿಕೊಂಡು ಕ್ರಮದ ಬಗ್ಗೆ ನಿರ್ಧರಿಸುವುದಾಗಿ ಬಿಸಿಸಿಐ ತಿಳಿಸಿದೆ.
ಮೂರನೇ ಟೆಸ್ಟ್ ಮುಕ್ತಾಯದ ಬಳಿಕ ಬಿಸಿಸಿಐ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ತಂಡವನ್ನು ಆಯ್ಕೆ ಮಾಡಲಿದ್ದು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲು ಚಿಂತಿಸಿದೆ.
Comments are closed.