ಕ್ರೀಡೆ

ಟೀಂ ಇಂಡಿಯಾಕ್ಕೆ ಚೊಚ್ಚಲ ವಿಶ್ವ ಕಪ್ ತಂದುಕೊಟ್ಟ ಕಪಿಲ್ ದೇವ್​ಗೆ ಹೃದಯಾಘಾತ!

Pinterest LinkedIn Tumblr

ನವದೆಹಲಿ: ಭಾರತಕ್ಕೆ ಮೊದಲ ಬಾರಿಗೆ ಕ್ರಿಕೆಟ್ ವಿಶ್ವಕಪ್ ಗೆಲ್ಲುವ ರುವಾರಿ, ಖ್ಯಾತ ಕ್ರಿಕೆಟಿಗ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಪಿಲ್ ದೇವ್ ನವದೆಹಲಿಯ ಆಸ್ಪತ್ರೆಯಲ್ಲಿ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ರಲ್ಲಿ ಕಪಿಲ್ ದೇವ್ ಕ್ರಿಕೆಟ್ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುವ ಮೂಲಕ ಸಾಕಷ್ಟು ಸಕ್ರಿಯರಾಗಿದ್ದು ಅವರು ಮಧುಮೇಹ ಸಂಬಂಧಿತ ಆರೋಗ್ಯ ಸಮಸ್ಯೆಗಳನ್ನೂ ಹೊಂದಿದ್ದರು ಎನ್ನಲಾಗಿದೆ.

ಲಾರ್ಡ್ಸ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ಶ್ರೇಷ್ಟ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ 1983 ರಲ್ಲಿ ಭಾರತ ತಂಡ ವಿಶ್ವಕಪ್ ಗೆಲ್ಲುವುದಕ್ಕೆ ಕಾರಣವಾಗಿದ್ದರು.

ಕಪಿಲ್ ದೇವ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.

Comments are closed.