ದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವಿಜಯ ಸಾಧಿಸಿರುವ ಭಾರತ ತಂಡಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಪಂದ್ಯದುದ್ದಕ್ಕೂ ಭಾರತೀಯ ಆಟಗಾರರು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ ಎಂದು ಶ್ಲಾಘಿಸಿದ್ದಾರೆ.
ಈ ಸರಣಿಯಲ್ಲಿ ಭಾರತ ತಂಡದ ಆಟಗಾರರು ತೋರಿದ ಉತ್ಸಾಹ ಮತ್ತು ಗೆಲುವಿನೆಡೆಗೆ ಸಾಗಿದ ಪರಿ ನಿಜಕ್ಕೂ ಅಭಿನಂದನೀಯ ಎಂದು ಬಣ್ಣಿಸಿರುವ ಮೋದಿ, ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.
ಜೊತೆಗೆ ಕಾಂಗರೂ ಪಡೆ ವಿರುದ್ಧ ಸರಣಿ ಗೆದ್ದಿರುವ ಭಾರತ ಕ್ರಿಕೆಟ್ ತಂಡಕ್ಕೆ ಬಿಸಿಸಿಐ ಭರ್ಜರಿ ಕೊಡುಗೆ ನೀಡಿದೆ. ಈ ಕುರಿತು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಘೋಷಣೆ ಮಾಡಿದ್ದು, ಟೀಂ ಇಂಡಿಯಾಕ್ಕೆ ₹5 ಕೋಟಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಅವಮಾನಕ್ಕೆ ಗೆಲುವಿನ ಮೂಲಕ ತಿರುಗೇಟು: ಕೊಹ್ಲಿ
ಟೀಂ ಇಂಡಿಯಾದ ಐತಿಹಾಸಿಕ ಗೆಲುವಿಗೆ ವಿರಾಟ್ ಕೊಹ್ಲಿ ಶುಭಾಶಯ ಸಲ್ಲಿಸಿದ್ದಾರೆ. ನಮ್ಮ ಪಾಲಿಗೆ ಇದೊಂದು ಅತ್ಯದ್ಭುತ ಗೆಲುವಾಗಿದೆ. ಅಡಿಲೇಡ್ನಲ್ಲಿ ನಮ್ಮನ್ನು ಅವಮಾನಿಸಿದವರಿಗೆ ಇದು ತಕ್ಕ ತಿರುಗೇಟು ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ.
Comments are closed.