ಕ್ರೀಡೆ

ಆಟವಾಡುತ್ತಲೇ ಕಬ್ಬಡಿ ಕೋರ್ಟ್‌ನಲ್ಲಿ ಜೀವಬಿಟ್ಟ ಯುವ ಆಟಗಾರ

Pinterest LinkedIn Tumblr

ಚೆನ್ನೈ: ಕಬಡ್ಡಿ ಆಟಗಾರನೊಬ್ಬ ಮೈದಾನದಲ್ಲೇ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಪನ್ರುತಿ ಎಂಬಲ್ಲಿ ನಡೆದಿದೆ.

ಮೃತನನ್ನು ವಿಮಲ್ ರಾಜ್ (22) ಎಂದು ಗುರುತಿಸಲಾಗಿದ್ದು, ಇವರು ಕಾಟಂಪಲಿಯೂರಿನ ಪೆರಿಯಪುರಾಂಗಣಿ ನಿವಾಸಿಯಾಗಿದ್ದು, ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಎಸ್‍ಸಿ ಓದುತ್ತಿದ್ದರು. ನಿನ್ನೆ ಪರುಂತಿ ಸಮೀಪದ ಮಂಡಿಕುಪ್ಪಂನಲ್ಲಿ ತಮಿಳುನಾಡಿನ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿ ರೈಡ್‍ನಲ್ಲಿದ್ದ ವೇಳೆ ವಿಮಲ್‍ರಾಜ್‍ಗೆ ಹೃದಯಾಘಾತವಾಗಿದೆ.

ಎದುರಾಳಿ ಆಟಗಾರನೊಬ್ಬ ಹಿಡಿಯಲು ಹೋದಾಗ ಆತ ವಿಮಲ್ ರಾಜ್ ಎದೆ ಮೇಲೆ ಬಿದ್ದಿದ್ದ. ಈ ವೇಳೆ ಕೆಳಗೆ ಬಿದ್ದ ವಿಮಲರಾಜ್ ಮೇಲೇಳಲು ಯತ್ನಿಸಿದ್ದಾರೆ. ಆದರೆ ಸಾಧ್ಯವಾಗದೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕೂಡಲೇ ಆಘಾತಗೊಂಡ ಸಹ ಆಟಗಾರರು ವಿಮಲರಾಜ್ ರಕ್ಷಣೆ ಮಾಡಲು ಯತ್ನಿಸಿದ್ದು
ಸಮೀಪದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ಹೋಗುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ವಿಮಲರಾಜ್ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments are closed.