ಕರಾವಳಿ

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯ ಸಮಾರೋಪ; ಬಾಲಕ&ಬಾಲಕಿಯರ ವಿಭಾಗದಲ್ಲಿ ದ.ಕ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ

Pinterest LinkedIn Tumblr

(ವರದಿ- ಯೋಗೀಶ್ ಕುಂಭಾಸಿ)
ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ, ಸುಣ್ಣಾರಿ ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಹಾಗೂ ಎಂ.ಎಂ ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಕುಂದಾಪುರದ ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಮೂರು ದಿನಗಳ ಕಾಲ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭವು ಶನಿವಾರ ಸಂಜೆ ನಡೆಯಿತು.

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ.ರಮೇಶ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸರಕಾರದ ದೃಷ್ಟಿಯಲ್ಲಿ ಕ್ರೀಡೆ ಕೊನೆಯ ಹಂತದಲ್ಲಿದೆ. ಮುಂದಿನ ದಿನಗಳಲ್ಲಾದರೂ ಕ್ರೀಡೆಗೆ ಸರಕಾರದ ಪ್ರೋತ್ಸಾಹ ಅಗತ್ಯವಾಗಿ ಬೇಕಿದೆ. ಎಲ್ಲರ ಅಹಕಾರವಿದ್ದಾಗ ಮಾತ್ರ ಕ್ರೀಡಾಪಟು ಒಲಂಪಿಕ್ ಅಂತಹ ಸಾಧನೆ ಮಾಡಲು ಸಾಧ್ಯವಿದೆ. ನಮ್ಮ ಸಂಸ್ಥೆಯಲ್ಲಿ ವಾಲಿಬಾಲ್ ರಾಜ್ಯ ಮಟ್ಟದ ಪಂದ್ಯವನ್ನು ನ್ಯಾಯಯುತವಾಗಿ ಆಡಿಸಲು ನಿರಂತರವಾದ ಪ್ರಯತ್ನವಿತ್ತು ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಲಾಖೆ ಸುತ್ತೋಲೆಯಂತೆ ಕಾರ್ಯಕ್ರಮ ನಡೆಸಲು‌ ಮುಂದಾದಾಗ ಈ ಸಂಸ್ಥೆ ಒಪ್ಪಿಕೊಂಡು ಅಚ್ಚುಕಟ್ಟಾಗಿ ನಿರ್ವಹಿಸಿದ್ದು ಸಾರ್ವಜನಿಕರೂ ಕೂಡ ಸಹಯೋಗ ನೀಡಿದಾಗ ಯಾವುದೇ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಸಾಧ್ಯವಿದೆ ಎಂದರು.

ದೈಹಿಕ ಶಿಕ್ಷಣ ಉಪನ್ಯಾಸಕ ನಾಗರಾಜ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಕ್ರೀಡಾಕೂಟಕ್ಕೆ ಸಹಕರಿಸಿದವರನ್ನು ಗೌರವಿಸಲಾಯಿತು.

ಎಂ.ಎಂ ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಂ. ಮಹೇಶ್ ಹೆಗ್ಡೆ, ಜಯರತ್ನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ದಿನೇಶ್ ಹೆಗ್ಡೆ ಮೊಳಹಳ್ಳಿ, ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ವಿವೇಕೋದಯ ಎಜುಕೇಶನಲ್ ಟ್ರಸ್ಟ್ ಕಿಶೋರ್ ಕುಮಾರ್ ಶೆಟ್ಟಿ, ವಿವೇಕೋದಯ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಧ್ಯಾಯ ರಘುರಾಮ ಶೆಟ್ಟಿ, ರಾಮಕೃಷ್ಣ ಎಜುಕೇಶನ್ ಸೊಸೈಟಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕುಂದಾಪುರ ಪದವಿಪೂರ್ವ ಕಾಲೇಜು ಉಪನ್ಯಾಸಕ ಉದಯ್ ಕುಮಾರ್ ಶೆಟ್ಟಿ ಕಾಳಾವರ, ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಶೆಟ್ಟಿ, ರಾಜ್ಯ ದೈ.ಶಿ. ಶಿಕ್ಷಕರ ಸಂಘದ ಕಾರ್ಯದರ್ಶಿ ವಿಜಯ್ ಕುಮಾರ್ ಶೆಟ್ಟಿ ಸಾಬ್ರಕಟ್ಟೆ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ, ಶಿಕ್ಷಣ ಇಲಾಖೆ ಕ್ರೀಡಾ ಸಂಯೋಜಕ ದಿನೇಶ್ ಕುಮಾರ್ ಎ., ಎಕ್ಸಲೆಂಟ್ ಪಿಯು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸತೀಶ್ ಕುಮಾರ್, ಜಯಲತಾ, ಪಂದ್ಯಾಟದ ವೀಕ್ಷಕ ಮಹಾಂತೇಶ, ಡಾ. ಗೋವಿಂದ, ನ್ಯಾಯವಾದಿ ವಿಕಾಸ್ ಹೆಗ್ಡೆ, ಬ್ರಹ್ಮಾವರ ಸಕ್ಕರೆ ಕಾರ್ಖಾನೆ ನಿರ್ದೇಶಕ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಸಮಾಜ ಸೇವಕ ಡೇವಿಡ್ ಸಿಕ್ವೇರಾ, ಕಟ್ ಬೆಲ್ತೂರು ಗ್ರಾ.ಪಂ ಸದಸ್ಯ ವಿಠಲ್ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ಅರುಣ್ ಪ್ರಕಾಶ್, ಪ.ಪೂ.ದೈ.ಶಿ. ಶಿಕ್ಷಕರ ಸಂಘದ ಕುಂದಾಪುರ ತಾಲೂಕು ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಉದ್ಯಮಿ ಅನಿಲ್ ಕುಮಾರ್ ಶೆಟ್ಟಿ, ಶೇಖರ್ ಶೆಟ್ಟಿ ಮೊದಲಾದವರಿದ್ದರು.

ಸುಣ್ಣಾರಿ ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಸ್ವಾಗತಿಸಿದರು, ಕೋಶಾಧಿಕಾರಿ ಭರತ್ ಶೆಟ್ಟಿ ವಂದಿಸಿದರು. ಶಿಕ್ಷಕ ಸತೀಶ್ ಶೆಟ್ಟಿ ಪ
ಚಿತ್ರಪಾಡಿ ನಿರೂಪಿಸಿದರು.

ಫಲಿತಾಂಶ:

33 ಶೈಕ್ಷಣಿಕ ಜಿಲ್ಲೆಯ ಒಟ್ಟು 66 ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಕೊನೆಯ ಹಂತದ ಪಂದ್ಯಾಟದಲ್ಲಿ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ದ.ಕ ಹಾಗೂ ಉಡುಪಿ ಜಿಲ್ಲೆ ನಡುವೆ ಹಣಾಹಣಿ ಏರ್ಪಟ್ಟಿದ್ದು ಉತ್ತಮ ಐದು ಪಂದ್ಯದಲ್ಲಿ ಮೂರು ಪಂದ್ಯ ಗೆದ್ದು ದ.ಕ ಜಿಲ್ಲೆಯ ತಂಡ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತ್ತು.

ಬಾಲಕರ ವಿಭಾಗದಲ್ಲಿ ಪ್ರಥಮ- ದಕ್ಷಿಣ ಕನ್ನಡ ಜಿಲ್ಲೆ
ದ್ವಿತೀಯ- ಉಡುಪಿ ಜಿಲ್ಲೆ
ತೃತೀಯ- ಮೈಸೂರು
ಚತುರ್ಥ- ತುಮಕೂರು

ಬಾಲಕಿಯರ ವಿಭಾಗದಲ್ಲಿ ಪ್ರಥಮ: ದಕ್ಷಿಣ ಕನ್ನಡ ಜಿಲ್ಲೆ
ದ್ವಿತೀಯ- ಉಡುಪಿ ಜಿಲ್ಲೆ
ತೃತೀಯ- ಮೈಸೂರು
ಚತುರ್ಥ ಸ್ಥಾನ- ವಿಜಯನಗರ

ವೈಯಕ್ತಿಕ ವಿಭಾಗ:
ಬಾಲಕಿಯರ ವಿಭಾಗದಲ್ಲಿ ಉತ್ತಮ ಪಾಸರ್- ದಕ್ಷಿಣ ಕನ್ನಡ ಜಿಲ್ಲೆಯ ತನ್ವಿ
ಉತ್ತಮ ಅಟ್ಯಾಕರ್- ದ.ಕ ಜಿಲ್ಲೆಯ ವೈಷ್ಣವಿ
ಬೆಸ್ಟ್ ಆಲ್ ರೌಂಡರ್- ಉಡುಪಿ‌ ಜಿಲ್ಲೆಯ ಕೌಸಲ್ಯಾ
ಅತ್ಯುತ್ತಮ ಆಟಗಾರ್ತಿ ಮಂಗಳೂರು ತಂಡದ ಅಶ್ವಿನಿ

ಬಾಲಕರ ವಿಭಾಗದಲ್ಲಿ ಉತ್ತಮ ಪಾಸರ್ – ದ.ಕ ಜಿಲ್ಲೆಯ ಪುನೀತ್
ಉತ್ತಮ ಅಟ್ಯಾಕರ್- ದ.ಕ ಜಿಲ್ಲೆ ತಂಡದ ಭರತ್
ಬೆಸ್ಟ್ ಆಲ್ ರೌಂಡರ್- ಉಡುಪಿ ತಂಡದ ಭುವನ್

 

Comments are closed.